ಆ್ಯಪ್ನಗರ

ರಾಜ್ಯದಲ್ಲಿ ಏರಿದ ತಾಪಮಾನ

ರಾಜ್ಯದಲ್ಲಿ ಬಿಸಿಲ ಧಗೆ ಆರಂಭವಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ಮುಟ್ಟಿದೆ...

Vijaya Karnataka 26 Mar 2018, 5:00 am
ಬೆಂಗಳೂರು : ರಾಜ್ಯದಲ್ಲಿ ಬಿಸಿಲ ಧಗೆ ಆರಂಭವಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ಮುಟ್ಟಿದೆ.
Vijaya Karnataka Web heat weather
ರಾಜ್ಯದಲ್ಲಿ ಏರಿದ ತಾಪಮಾನ


ವಾಯುಭಾರ ಕುಸಿತದಿಂದ ಮಾರ್ಚ್‌ ಎರಡನೇ ವಾರದಲ್ಲಿ ಮಳೆ ಸುರಿದಿತ್ತು. ಬೇಸಿಗೆ ಮಳೆಯಿಂದಾಗಿ ರಾಜ್ಯದ ಬಹುತೇಕ ಕಡೆ ತಾಪಮಾನ ಕುಸಿದಿತ್ತು. ಈಗ ಬೇಸಿಗೆಯ ನಿಜವಾದ ದಿನಗಳು ಆರಂಭವಾಗಿದ್ದು, ದಿನೇದಿನೆ ಸೆಕೆ ಅಧಿಕವಾಗುತ್ತಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಧಗೆ ಹೆಚ್ಚಿದ್ದು, ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ಈ ತಿಂಗಳಾಂತ್ಯದಲ್ಲಿ ಇನ್ನೂ ಒಂದರಿಂದ ಎರಡು ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ತಾಪಮಾನ 37-38 ಡಿಗ್ರಿ ಸೆಲ್ಸಿಯಸ್‌ ತಲುಪಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ, ಕಲಬುರ್ಗಿಯಲ್ಲಿ 40.4 ಡಿಗ್ರಿ , ಬಳ್ಳಾರಿಯಲ್ಲಿ 40 ಡಿಗ್ರಿ , ವಿಜಯಪುರದಲ್ಲಿ 38 ಡಿಗ್ರಿ , ಬಾಗಲಕೋಟ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ 37 ಡಿಗ್ರಿ , ಚಿತ್ರದುರ್ಗ, ಚಾಮರಾಜನಗರದಲ್ಲಿ 35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ