ಆ್ಯಪ್ನಗರ

ಮಳೆ ಅಬ್ಬರ: ತಗ್ಗು ಪ್ರದೇಶಗಳಲ್ಲಿ ನೀರು, ಪರಿಹಾರ ಕಾರ್ಯಕ್ಕೆ ಬಸವರಾಜ ಬೊಮ್ಮಾಯಿ ಸೂಚನೆ

ತಗ್ಗು ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಚುರುಕುಗೊಳಿಸಲು ಸೂಚಿಸಲಾಗಿದೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ. ಮಳೆ ನಿಂತ ತಕ್ಷಣ ರಸ್ತೆ ರಿಪೇರಿ ಆಗ್ಬೇಕು. 280 ಕೋಟಿ ಹಣವನ್ನು ಟೆಂಡರ್‌ನಲ್ಲಿ ಅನುಮತಿ ನೀಡಿದ್ದೇವೆ

Vijaya Karnataka Web 17 Nov 2021, 1:04 pm
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು ತಗ್ಗು ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Vijaya Karnataka Web ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವರ್ಷ ಅನಿರೀಕ್ಷಿತ ಮಳೆ ನಿರಂತರ ಬೀಳುತ್ತಿದೆ.‌ಇನ್ನೂ ನಾಲ್ಕೈದು ದಿನ ಮಳೆ ಇದೆ ಅಂತ ಹೇಳುತ್ತಿದ್ದಾರೆ. ಇದರ ಒಟ್ಟು ಪರಿಣಾಮ ಬೆಂಗಳೂರು ಸೇರಿ ಹಲವು ಜಿಲ್ಲೆ ಗಳ ಮೇಲಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಹಾಳಾಗಿವೆ. ಮಳೆ ನಿಂತ ತಕ್ಷಣ ರಸ್ತೆ ದುರಸ್ತಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಮಿತ್‌ ಶಾ ಸಭೆಯಲ್ಲಿ ಕರ್ನಾಟಕದ ವಿಷಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸಿದ್ದೇನೆ: ಬೊಮ್ಮಾಯಿ

ತಗ್ಗು ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಚುರುಕುಗೊಳಿಸಲು ಸೂಚಿಸಲಾಗಿದೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ. ಮಳೆ ನಿಂತ ತಕ್ಷಣ ರಸ್ತೆ ರಿಪೇರಿ ಆಗ್ಬೇಕು. 280 ಕೋಟಿ ಹಣವನ್ನು ಟೆಂಡರ್‌ನಲ್ಲಿ ಅನುಮತಿ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮಿಕ್ಷೆ ನಡೆಸಿದ್ದೇವೆ.‌‌ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸುತ್ತೇವೆ.ಇವತ್ತು ಭತ್ತ ಖರೀದಿಯ ಬಗ್ಗೆ ಸಭೆ ನಡೆಸುತ್ತೇನೆ. ತರಕಾರಿ ಕೃಷಿ ಹಾನಿ ಬಗ್ಗೆ ಕೃಷಿ ಇಲಾಖೆಯ ಜೊತೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಆರೋಪಕ್ಕೆ ತಕ್ಕ ಉತ್ತರ ನೀಡಿ, ಸಚಿವರಿಗೆ ಸಿಎಂ ಸೂಚನೆ?

ಮಳೆ ಹಾನಿ ಪರಿಹಾರ ನೀಡುವ ಕುರಿತಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಕುರಿತು ಪ್ರತಿಕ್ರಿಯೆ ನೀಡಿ, ಅವರು ಪತ್ರ ಬರೆಯುವ ಮೊದಲೇ ನಾವು ಬೆಳೆ ಸಮ್ಮೀಕ್ಷೆ ನಡೆಸಿ, ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ