ಆ್ಯಪ್ನಗರ

ತಿಂಗಳಾಂತ್ಯಕ್ಕೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ತಿಂಗಳಾಂತ್ಯಕ್ಕೆ ಮತ್ತೆ ಮಳೆ ಮರಳಲಿದೆ. ತಮಿಳುನಾಡು, ಕರ್ನಾಟಕ ಈ ಎರಡೂ ರಾಜ್ಯಗಳ ಗಡಿಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijaya Karnataka Web 27 Oct 2020, 11:35 pm
ಬೆಂಗಳೂರು: ರಾಜ್ಯದಲ್ಲಿ ತಿಂಗಳಾಂತ್ಯಕ್ಕೆ ಮತ್ತೆ ಮಳೆ ಮರಳಲಿದೆ. ಉತ್ತರ ಕರ್ನಾಟಕದಲ್ಲಿ ಅನಾಹುತ ಉಂಟು ಮಾಡಿದ್ದ ಚಿತ್ತಾ ಮಳೆ ದಕ್ಷಿಣಕ್ಕೆ ಚಿತ್ತೈಸಿಸಿ ಭಾರಿ ವರ್ಷಧಾರೆಗೆ ದಾರಿ ಮಾಡಿಕೊಟ್ಟಿತ್ತು. ಈ ಬಾರಿ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ತಮಿಳುನಾಡು ಹಾಗೂ ಕೇರಳದತ್ತ ಸಾಗಲಿದೆ. ಇದರಿಂದಾಗಿ ಈ ಎರಡೂ ರಾಜ್ಯಗಳ ಗಡಿಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Vijaya Karnataka Web Rain
ಹವಾಮಾನ ಇಲಾಖೆಯ ಮಳೆ ನಕ್ಷೆ


ಅ.30ರಿಂದ ನಿರೀಕ್ಷಿಸಲಾಗಿರುವ ಮಳೆಯು ಕರಾವಳಿ ಹಾಗೂ ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡಿಗೆ ಸೀಮಿತವಾಗಲಿದೆ. ಆದರೆ, ಹಿಂದಿನಷ್ಟು ಬಿರುಸು ಮಳೆ ಬಾರದಿದ್ದರೂ, ಸಾಧಾರಣ ಪ್ರಮಾಣದ ವರ್ಷಧಾರೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆ ಕಾಟ ಇರದು. ಆ ಜಿಲ್ಲೆಗಳ ಸೀಮಿತ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆ ಮಾತ್ರ ಆಗಲಿದ್ದು, ಒಣ ಹವೆ ಮುಂದುವರಿಯಲಿದೆ.

ಇನ್ನೆರಡು ದಿನ ಗುಡುಗು ಸಹಿತ ಮಳೆ: 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಮುಂಬರುವ ಶುಕ್ರವಾರ ಹಾಗೂ ಶನಿವಾರ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ/ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ