ಆ್ಯಪ್ನಗರ

ಕನಕಪುರ ಟು ಕೆಪಿಸಿಸಿ, ಇದು ಡಿಕೆಶಿ ರಾಜಕೀಯ ಹಿಸ್ಟರಿ

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹೈಕಮಾಂಡ್‌ ಘೋಷಣೆ ಮಾಡಿದೆ. ಈ ಮೂಲಕ ಕೆಪಿಸಿಸಿ ಸಾರಥಿ ಯಾರು ಎಂಬ ಗೊಂದಲ ಕೊನೆಗೂ ಬಗೆಹರಿದಂತಾಗಿದೆ. ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ರಾಜಕೀಯ ಹಿನ್ನೆಲೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Vijaya Karnataka Web 11 Mar 2020, 4:13 pm
ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯವನ್ನು ಹೈಕಮಾಂಡ್‌ ನೀಡಿದೆ. ಕೆಲವು ತಿಂಗಳಿಂದ ಗೊಂದಲದಲ್ಲಿದ್ದ ಕೆಪಿಸಿಸಿ ಜಂಟಾಟಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಟ್ರಬಲ್‌ ಶೂಟರ್‌ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್‌ ಇನ್ಮುಂದೆ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ. ಡಿಕೆಶಿ ರಾಜಕೀಯ ಹೋರಾಟ ಹಾಗೂ ಹಿನ್ನೆಲೆಯ ಕುರಿತಾಗಿ ಇಲ್ಲಿದೆ ಸಂಪೂರ್ಣ ವಿವರ.
Vijaya Karnataka Web dk 2


*ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ ಹುಟ್ಟಿದ್ದು ಮೇ 15 ಮೇ 1962 ರಂದು.

*18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್ಎಸ್‌ಯುಐಗೆ ಸೇರ್ಪಡೆ.

ಸಿದ್ದರಾಮಯ್ಯ ರಾಜೀನಾಮೆ ತಿರಸ್ಕಾರ; ಸಿಎಲ್‌ಪಿ, ವಿಪಕ್ಷ ನಾಯಕರಾಗಿ ಮುಂದುವರಿಕೆ

*1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್.ಡಿ. ದೇವೇಗೌಡರ ವಿರುದ್ಧ ಸ್ಪರ್ಧೆ.

*1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು.

*1991ರಲ್ಲಿ ಬಂಗಾರಪ್ಪ ಸರ್ಕಾರದಲ್ಲಿ ಬಂಧಿಖಾನೆ ಸಚಿವರಾಗಿ ಆಯ್ಕೆ.

*1999-2002 ರಲ್ಲಿ ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ಕ್ಯಾಬಿನೆಟ್‍ ದರ್ಜೆ ಸಚಿವರನ್ನಾಗಿ ನೇಮಕ.

*2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿ ನೇಮಕ.

ಬ್ರೇಕಿಂಗ್ ನ್ಯೂಸ್‌: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆಯ್ಕೆ

*ಸಿದ್ದರಾಮಯ್ಯ ಸರ್ಕಾರದಲ್ಲಿ ಇಂಧನ ಖಾತೆ ಸಚಿವರಾಗಿ ಕಾರ್ಯನಿರ್ವಹಣೆ.

*2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ, ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಕಾರ್ಯನಿರ್ವಹಣೆ .

*ಕಾಂಗ್ರೆಸ್ ಪಕ್ಷದಲ್ಲಿ ಟ್ರಬಲ್‌ ಶೂಟರ್‌ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್‌ ರೆಸಾರ್ಟ್‌ ರಾಜಕಾರಣ ಸಂದರ್ಭದಲ್ಲಿ ಸರ್ಕಾರ ಉಳಿಸುವಲ್ಲಿ ಮಹತ್ವ ಪಾತ್ರವಹಿಸಿದ್ದರು.

ಪಕ್ಷ ಸಂಘಟನೆ ಹಾಗೂ ಪವರ್‌ ಪಾಲಿಟಿಕ್ಸ್‌ನಲ್ಲಿ ತಮ್ಮದೇ ಶೈಲಿಯ ರಾಜಕಾರಣದಿಂದ ರಾಜ್ಯದಲ್ಲಿ ಗುರುತಿಸಿಕೊಂಡವರು ಡಿಕೆಶಿ. ಈ ನಡುವೆ ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದರು.

ಇಡಿ ಪ್ರಕರಣ ಹಾಗೂ ಬಂಧನದ ಹಿನ್ನೆಲೆಯಲ್ಲಿ ಡಿಕೆಶಿ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಕೊನೆಗೂ ಹೈಕಮಾಂಡ್‌ ಡಿಕೆಶಿಗೆ ಮಣೆಹಾಕಿದೆ.

ಸದ್ಯದ ಕಾಂಗ್ರೆಸ್ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಬೇಕು ಎಂಬ ಒತ್ತಡಗಳು ಕೇಳಿಬಂದಿದ್ದವು. ಆದರೆ ಪಕ್ಷದ ಆತಂರಿಕ ವಿರೋಧದಿಂದ ಇದು ಸಾಧ್ಯವಾಗಿರಲಿಲ್ಲ. ಕೊನೆಗೂ ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ