ಆ್ಯಪ್ನಗರ

ರಾಜ್ಯದಲ್ಲಿ ಎಚ್‌1ಎನ್‌1 ಹೈ ಅಲರ್ಟ್‌: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣ ಪತ್ತೆ

ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 51 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ತಲಾ 11, ಧಾರವಾಡ, ಮೈಸೂರು, ಹಾಸನದಲ್ಲಿ ತಲಾ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Vijaya Karnataka Web 28 Sep 2018, 2:23 pm
ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ಡೆಂಘೆ ಪ್ರಕರಣಗಳು ಹೆಚ್ಚಾಗಿ ಸುದ್ದಿ ಮಾಡಿದ್ದಂತೆಯೇ, ಈ ಬಾರಿ ಎಚ್‌1ಎನ್‌1 ಸುದ್ದಿ ಮಾಡಿದೆ. ಜನವರಿ ಆರಂಭದಿಂದ ಈವರೆಗೆ ರಾಜ್ಯದಲ್ಲಿ ಒಟ್ಟಾರೆ 167 ಮಂದಿಯಲ್ಲಿ ಎಚ್‌1ಎನ್‌1 ಸೋಂಕು ಕಾಣಿಸಿಕೊಂಡಿದ್ದು, ಸೆ. 25ರವರೆಗೆ 3,968 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್‌ ತಿಂಗಳೊಂದರಲ್ಲಿ 102 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಅಂಕಿ ಅಂಶ ಹೇಳಿದೆ.
Vijaya Karnataka Web h1n12


ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆ ಬಿಬಿಎಂಪಿ, ಬೆಂಗಳೂರು ನಗರ, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಎಚ್‌1ಎನ್‌1 ವೈರಾಣು ಬಗ್ಗೆ ಎಚ್ಚರದಿಂದರಬೇಕು. ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಎಚ್‌1ಎನ್‌1 ವಿಭಾಗದ ಜಂಟಿ ನಿರ್ದೇಶಕ ಡಾ. ಸಜ್ಜನ್‌ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 51 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ತಲಾ 11, ಧಾರವಾಡ, ಮೈಸೂರು, ಹಾಸನದಲ್ಲಿ ತಲಾ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

2017ರಲ್ಲಿ ಎಚ್‌1ಎನ್‌1ಗೆ 15 ಮಂದಿ ಬಲಿಯಾಗಿದ್ದರೆ, 2015ರಲ್ಲಿ 94 ಮಂದಿ ಸಾವನ್ನಪ್ಪಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ