ಆ್ಯಪ್ನಗರ

ಸಿಇಟಿಗೆ ಹೈಕೋರ್ಟ್‌ ಹಸಿರು ನಿಶಾನೆ, ಗುರುವಾರ, ಶುಕ್ರವಾರ ಪರೀಕ್ಷೆ

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸಿಇಟಿಗೆ ಅವಕಾಶ ನೀಡಲಾಗಿದೆ. ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಮಾಡುವುದಿಲ್ಲ. ಜು. 30, 31ರಂದು ಸಿಇಟಿ ನಡೆಸಲಿದೆ ಎಂದು ಹೈಕೋರ್ಟ್‌ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಲಾಗಿದೆ.

Vijaya Karnataka Web 29 Jul 2020, 8:50 pm
ಬೆಂಗಳೂರು: ರಾಜ್ಯದಲ್ಲಿ ಜು.30, 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ.
Vijaya Karnataka Web ಪರೀಕ್ಷೆ
ಪರೀಕ್ಷೆ


ಸಿಇಟಿ ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಪೀಠ ತಿರಸ್ಕೃರಿಸಿದ್ದು, ಇದರೊಂದಿಗೆ ಪರೀಕ್ಷೆಗೆ ಹಾದಿ ಸುಗಮವಾಗಿದೆ. ಗುರುವಾರ ಮತ್ತು ಶುಕ್ರವಾರ ಸಿಇಟಿ ನಡೆಯಲಿದೆ.

ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಅರವಿಂದ ಕುಮಾರ್‌ ಮತ್ತು ನ್ಯಾಯಮೂರ್ತಿ ಎಂಎ ಅರುಣ್‌ ನೇತೃತ್ವದ ನ್ಯಾಯಪೀಠ ಕೆಲವು ಸೂಚನೆಗಳನ್ನು ಸರಕಾರಕ್ಕೆ ನೀಡಿದೆ.

ಕೋವಿಡ್‌ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ಕಂಟೇನ್‌ಮೆಂಟ್‌ ವಲಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸಿಇಟಿಗೆ ಅವಕಾಶ ನೀಡಲಾಗಿದೆ. ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಮಾಡುವುದಿಲ್ಲ. ಜು. 30, 31ರಂದು ಸಿಇಟಿ ನಡೆಸಲಿದೆ ಎಂದು ಹೈಕೋರ್ಟ್‌ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ