ಬೆಂಗಳೂರು: ರಾಜ್ಯದಲ್ಲಿ ಜು.30, 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ಸಿಇಟಿ ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ತಿರಸ್ಕೃರಿಸಿದ್ದು, ಇದರೊಂದಿಗೆ ಪರೀಕ್ಷೆಗೆ ಹಾದಿ ಸುಗಮವಾಗಿದೆ. ಗುರುವಾರ ಮತ್ತು ಶುಕ್ರವಾರ ಸಿಇಟಿ ನಡೆಯಲಿದೆ.
ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಎಂಎ ಅರುಣ್ ನೇತೃತ್ವದ ನ್ಯಾಯಪೀಠ ಕೆಲವು ಸೂಚನೆಗಳನ್ನು ಸರಕಾರಕ್ಕೆ ನೀಡಿದೆ.
ಕೋವಿಡ್ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ಕಂಟೇನ್ಮೆಂಟ್ ವಲಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸಿಇಟಿಗೆ ಅವಕಾಶ ನೀಡಲಾಗಿದೆ. ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಮಾಡುವುದಿಲ್ಲ. ಜು. 30, 31ರಂದು ಸಿಇಟಿ ನಡೆಸಲಿದೆ ಎಂದು ಹೈಕೋರ್ಟ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಲಾಗಿದೆ.
ಸಿಇಟಿ ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ತಿರಸ್ಕೃರಿಸಿದ್ದು, ಇದರೊಂದಿಗೆ ಪರೀಕ್ಷೆಗೆ ಹಾದಿ ಸುಗಮವಾಗಿದೆ. ಗುರುವಾರ ಮತ್ತು ಶುಕ್ರವಾರ ಸಿಇಟಿ ನಡೆಯಲಿದೆ.
ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಎಂಎ ಅರುಣ್ ನೇತೃತ್ವದ ನ್ಯಾಯಪೀಠ ಕೆಲವು ಸೂಚನೆಗಳನ್ನು ಸರಕಾರಕ್ಕೆ ನೀಡಿದೆ.
ಕೋವಿಡ್ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಬೇಕು. ಕಂಟೇನ್ಮೆಂಟ್ ವಲಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸಿಇಟಿಗೆ ಅವಕಾಶ ನೀಡಲಾಗಿದೆ. ಹೊರರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಮಾಡುವುದಿಲ್ಲ. ಜು. 30, 31ರಂದು ಸಿಇಟಿ ನಡೆಸಲಿದೆ ಎಂದು ಹೈಕೋರ್ಟ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಲಾಗಿದೆ.