ಆ್ಯಪ್ನಗರ

ಅತ್ಯಾಚಾರ ಆರೋಪ ಪ್ರಕರಣ: ನಿತ್ಯಾನಂದ ಸ್ವಾಮೀಜಿ ಬಂಧಿಸದಿರಲು ಸೂಚನೆ

ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ಬಿಡದಿ ನಿತ್ಯಾನಂದ ಪೀಠದ ನಿತ್ಯಾನಂದ ಸ್ವಾಮಿಯನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್‌ ಸೂಚನೆ ನೀಡಿದೆ.

Vijaya Karnataka 11 Sep 2018, 8:06 am
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ಬಿಡದಿ ನಿತ್ಯಾನಂದ ಪೀಠದ ನಿತ್ಯಾನಂದ ಸ್ವಾಮಿಯನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್‌ ಸೂಚನೆ ನೀಡಿದೆ.
Vijaya Karnataka Web nitya


ತಮ್ಮ ವಿರುದ್ಧ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್‌ ರದ್ದು ಕೋರಿ ಪರಮಹಂಸ ನಿತ್ಯಾನಂದ ಸ್ವಾಮೀಜಿ ಅಲಿಯಾಸ್‌ ರಾಜಶೇಖರನ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸ್ವಾಮೀಜಿ ಪರ ವಕೀಲರು ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ಸೋಮವಾರ ವಿಷಯ ಮಂಡಿಸಿದರು.

ಆಗ ವಾದ ಆಲಿಸಿದ ನ್ಯಾಯಪೀಠ, ಸರಕಾರಿ ಅಭಿಯೋಜಕರಾದ ರಾಚಯ್ಯ ಅವರಿಗೆ ಸೆ.17ರವರೆಗೆ ಸ್ವಾಮೀಜಿಯನ್ನು ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ಆರತಿರಾವ್‌ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮನಗರದ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಆ ನ್ಯಾಯಾಲಯದ ಮುಂದೆ ನಿತ್ಯಾನಂದ ಸ್ವಾಮೀಜಿ ಕಳೆದ ಮೂರು ಸಲ ಹಾಜರಾಗಿರಲಿಲ್ಲ. ಇದರಿಂದಾಗಿ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಅವರು ಸೆ.6ರಂದು ಸ್ವಾಮೀಜಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿ ವಿಚಾರಣೆಯನ್ನು ಸೆ.14ಕ್ಕೆ ನಿಗದಿ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ