ಆ್ಯಪ್ನಗರ

ಹಿಂದಿನ ಸರಕಾರದ ಕಾಮಗಾರಿಗಳಿಗೆ ತಡೆ ನೀಡಲು ಸಿಎಂಗೆ ಅಧಿಕಾರವಿದೆಯೇ?: ಹೈಕೋರ್ಟ್‌ ಪ್ರಶ್ನೆ

ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ಘೋಷಿಲಾಗಿದ್ದ ಕಾಮಗಾರಿಗಳಿಗೆ ತಡೆ ನೀಡಲು ಸಿಎಂಗೆ ಅಧಿಕಾರವಿದೆಯೇ? ಈ ರೀತಿಯ ನಿರ್ಧಾರ ಕೈಗೊಳ್ಳುವುದರಿಂದ ಕಾಮಗಾರಿ ವಿಳಂಬವಾಗುವುದಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು.

Vijaya Karnataka Web 28 Jan 2020, 6:02 pm
ಬೆಂಗಳೂರು: ಹಿಂದಿನ ಸರಕಾರ ನೀಡಿದ ಆದೇಶಗಳಿಗೆ ತಡೆ ನೀಡಲು ಮುಖ್ಯಮಂತ್ರಿಗೆ ಅಧಿಕಾರ ಇದೆಯೇ? ಯಾವ ಕಾನೂನಿನಡಿ ಕಾಮಗಾರಿಗೆ ತಡೆ ನೀಡಿದ್ದಾರೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಪ್ರಶ್ನಿಸಿದೆ.
Vijaya Karnataka Web ಹೈಕೋರ್ಟ್‌
ಹೈಕೋರ್ಟ್‌


ಮೈತ್ರಿ ಸರಕಾರದ ಅವಧಿಯಲ್ಲಿ ಘೋಷಿಸಲಾಗಿದ್ದ ಕಾಮಗಾರಿಗಳಿಗೆ ಹಾಲಿ ಮುಖ್ಯಮಂತ್ರಿ ತಡೆ ನೀಡಿದ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ನ್ಯಾಯಪೀಠ ನಡೆಸಿತು.

ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ಘೋಷಿಲಾಗಿದ್ದ ಕಾಮಗಾರಿಗಳಿಗೆ ತಡೆ ನೀಡಲು ಸಿಎಂಗೆ ಅಧಿಕಾರವಿದೆಯೇ? ಎಂದು ನ್ಯಾಯಪೀಠ ಪ್ರಶ್ನಿಸಿತು.

ಯಾವ ಕಾನೂನಿನಡಿ ಸಿಎಂ ಕಾಮಗಾರಿಗೆ ತಡೆ ನೀಡಿದ್ದಾರೆ? ಸಿಎಂ ಟಿಪ್ಪಣಿ ಆಧರಿಸಿ ಕಾಮಗಾರಿ ತಡೆ ಹಿಡಿಯಬಹುದೇ? ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

ಕಾಮಗಾರಿ ವಿಳಂಬದಿಂದಾಗುವ ನಷ್ಟಕ್ಕೆ ಹೊಣೆ ಯಾರು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ