ಆ್ಯಪ್ನಗರ

ಅಕ್ರಮ ವಲಸಿಗನ ಜಾಮೀನು ಷರತ್ತು ಸಡಿಲಿಸಲು ಹೈಕೋರ್ಟ್‌ ನಕಾರ

ಕರ್ಗಿಸ್ಥಾನದ ಪ್ರಜೆಯೊಬ್ಬ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದು, ಜಾಮೀನು ಷರತ್ತು ಸಡಿಲಿಸಲು ಹೈಕೋರ್ಟ್‌ ನಿರಾಕರಿಸಿದೆ. ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದು ಬೀದರ್‌ನ ಬಿಲಾಲ್‌ ಮಸೀದಿಯಲ್ಲಿ ಆತ ನೆಲೆಸಿದ್ದ.

Vijaya Karnataka Web 16 Sep 2020, 7:24 am
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ ಕರ್ಗಿಸ್ಥಾನದ ಪ್ರಜೆಯೊಬ್ಬ ಜಾಮೀನು ಷರತ್ತು ಸಡಿಲಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಕರ್ಗಿಸ್ಥಾನದ ತೊಯ್‌ ಚುಬೆಕ್‌ ಉಲು ಬಕೈತ್ಬೆಕ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ ಕುಮಾರ್‌ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.

ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದು ಬೀದರ್‌ನ ಬಿಲಾಲ್‌ ಮಸೀದಿಯಲ್ಲಿ ಆತ ನೆಲೆಸಿದ್ದ. ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ 1946ರ ವಿದೇಶಿ ಕಾಯ್ದೆ ಸೆಕ್ಷನ್‌ 14(ಎ)(ಬಿ)(ಸಿ) ಅಡಿ ಪ್ರಕರಣ ದಾಖಲಿಸಲಾಗಿತ್ತು.

ಬಂಧನಕ್ಕೊಳಗಾದ ನಂತರ ಆತನ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಮಾನ್ಯ ಮಾಡಿ, ಆತನ ವಿರುದ್ಧ ಬಾಕಿ ಇರುವ ಪ್ರಕರಣ ಇತ್ಯರ್ಥವಾಗುವವರೆಗೆ ಆತನನ್ನು ಬೆಂಗಳೂರನ್ನು ಡಿಟೆನ್ಷನ್‌ ಕೇಂದ್ರದಲ್ಲಿಡುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ