ಆ್ಯಪ್ನಗರ

ಖಾಲಿಯಿರುವ ಆಯುಷ್‌ ಸೀಟು ಭರ್ತಿಗೆ ಹೈಕೋರ್ಟ್‌ ಆದೇಶ

ಕರ್ನಾಟಕ ರಾಜ್ಯ ಆಯುಷ್‌ ಮೆಡಿಕಲ್‌ ಕಾಲೇಜು ಫೆಡರೇಷನ್‌ ಮತ್ತು ಜೆಎಸ್‌ಎಸ್‌ ಆಯುರ್ವೇದ ವೈದ್ಯ ಕಾಲೇಜು ಮತ್ತು ಆಸ್ಪತ್ರೆ ಸೇರಿದಂತೆ 56 ಕಾಲೇಜುಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎ.ಎಸ್‌.ಬೋಪಣ್ಣ ಹಾಗೂ ನ್ಯಾ.ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

Vijaya Karnataka Web 13 Oct 2018, 9:23 pm
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಶೇ.40ರಷ್ಟು ಆಯುಷ್‌ ಸೀಟುಗಳ ಭರ್ತಿಗೆ ನೀಟ್‌ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಾರ್ವಜನಿಕ ನೋಟಿಸ್‌ ನೀಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು. ಅಂತಹ ಅಭ್ಯರ್ಥಿಗೆ ನೀಡಿದ ಅವಕಾಶ ಮುಗಿದ ನಂತರ ನೀಟ್‌ ಬರೆಯದ ಅಭ್ಯರ್ಥಿಗಳಿಗೆ ಮೆರಿಟ್‌ ಮೇಲೆ ಸೀಟು ಆಯ್ಕೆಗೆ ಅವಕಾಶ ನೀಡುವಂತೆ ಹೈಕೋರ್ಟ್‌, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಿದೆ.
Vijaya Karnataka Web ayush medical


ಕರ್ನಾಟಕ ರಾಜ್ಯ ಆಯುಷ್‌ ಮೆಡಿಕಲ್‌ ಕಾಲೇಜು ಫೆಡರೇಷನ್‌ ಮತ್ತು ಜೆಎಸ್‌ಎಸ್‌ ಆಯುರ್ವೇದ ವೈದ್ಯ ಕಾಲೇಜು ಮತ್ತು ಆಸ್ಪತ್ರೆ ಸೇರಿದಂತೆ 56 ಕಾಲೇಜುಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎ.ಎಸ್‌.ಬೋಪಣ್ಣ ಹಾಗೂ ನ್ಯಾ.ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ರಾಜ್ಯ ಸರಕಾರ ಆ.15ರೊಳಗೆ ಪತ್ರಿಕೆಗಳ ಮೂಲಕ ನೀಟ್‌ನಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವಂತೆ ಸಾರ್ವಜನಿಕ ಪ್ರಕಟಣೆ ನೀಡಬೇಕು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಸೀಟು ಆಯ್ಕೆಗೆ ಅ.25ರವರೆಗೆ ಅವಕಾಶ ನೀಡಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ.

ನೀಟ್‌ನಲ್ಲಿ ಅರ್ಹತೆ ಪಡೆದವರಿಗೆ ಸೀಟುಗಳನ್ನು ಹಂಚಿಕೆ ಮಾಡಿದ ನಂತರ ಉಳಿದ ಸೀಟುಗಳನ್ನು ಕಾಲೇಜುಗಳಿಗೆ ಮೆರಿಟ್‌ ಆಧಾರದ ಮೇಲೆ ಪಟ್ಟಿ ಸಿದ್ಧಪಡಿಸಿ ಆಯುಷ್‌ ಕೋರ್ಸ್‌ನಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ನೀಡಬೇಕು. ಆ ಸೀಟು ಹಂಚಿಕೆ ಪ್ರಕ್ರಿಯೆ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುತ್ತದೆ ಎಂದೂ ನ್ಯಾಯಪೀಠ ಹೇಳಿದೆ. ಕೆಇಎ ಈ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅ.31ರೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ