ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ರಾಜಕೀಯ ಪಕ್ಷಗಳು ನಡೆಸಲಿರುವ ರ್ಯಾಲಿಗಳನ್ನು ನಿರ್ಬಂಧಿಸಬೇಕಾಗುತ್ತದೆಂದು ಹೈಕೋರ್ಟ್ ಗುರುವಾರ ಸರಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.
ಪ್ಲಾಸ್ಟಿಕ್ ನಿಷೇಧವಿದ್ದರೂ ಸಹ ಹೇಗೆ ಪ್ಲಾಸ್ಟಿಕ್ನಿಂದ ಮಾಡಿದ ಧ್ವಜಗಳನ್ನು ಇತ್ತೀಚೆಗೆ ನಡೆದ ಪಕ್ಷದ ರ್ಯಾಲಿಯಲ್ಲಿ ಬಳಕೆ ಮಾಡಿರುವುದು ಆಶ್ಚರ್ಯ ಮೂಡಿಸುತ್ತದೆ. ಆದರೆ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಏಕೆ ಏನೂ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಗಂಭೀರ ಕ್ರಮ ಜುರುಗಿಸಬೇಕಾಗುತ್ತದೆ ಎಂದು ಹಂಗಾಮಿ ಸಿಜೆ ಎಲ್.ನಾರಾಯಣಸ್ವಾಮಿ ಅವರಿದ್ದ ನ್ಯಾಯಪೀಠ ಹೇಳಿದೆ.
ನಗರದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ ಕುರಿತಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಆಲಿಸುತ್ತಿರುವ ನ್ಯಾಯಪೀಠ, ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸದೆ ತರಾಟೆಗೆ ತೆಗೆದುಕೊಂಡಿತಲ್ಲದೆ, ಏನೂ ಕ್ರಮ ಕೈಗೊಳ್ಳದ ಪಾಲಿಕೆ ಕ್ರಮವನ್ನು ಖಾರವಾಗಿ ಪ್ರಶ್ನಿಸಿತು.
ಯಾವ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ರ್ಯಾಲಿ ಹೆಸರಿನಲ್ಲಿ ನಿಷೇಧಿಸಲ್ಪಟ್ಟಿರುವ ಪ್ಲಾಸ್ಟಿಕ್ ಬಳಕೆ ಮಾಡುತ್ತಾರೋ ಅಂತಹವರ ವಿರುದ್ಧ ಕ್ರಮ ಕೈಗೊಂಡಿಲ್ಲವೇಕೆ ಎಂದೂ ಸಹ ಪ್ರಶ್ನಿಸಿತು.
ಪಾಲಿಕೆ ಪರ ವಕೀಲರು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆದರೆ ನ್ಯಾಯಪೀಠ, ಬಿಬಿಎಂಪಿ ಸಂಬಂಧಿಸಿದವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಸೂಚನೆ ನೀಡಿತು.
148 ಪ್ರಕರಣ: ಈ ಮಧ್ಯೆ, ಸರಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ 2018ರ ಡಿ.8ರಿಂದ 2019ರ ಫೆ.5ರವರೆಗೆ ಒಟ್ಟು 148 ಪ್ರಕರಣಗಳನ್ನು ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯಿದೆ ಅಡಿ ದಾಖಲಿಸಲಾಗಿದೆ. ಅವುಗಳಲ್ಲಿ 10 ಮಂದಿಗೆ ಶಿಕ್ಷೆಯಾಗಿದೆ ಮತ್ತು 64 ಪ್ರಕರಣಗಳ ಬಗ್ಗೆ ವಿಚಾರಣೆ ನಡೆದಿದೆ ಎಂದು ಹೇಳಿದೆ.
ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ, ''ಅನಧಿಕೃತ ಜಾಹೀರಾತುಗಳ ಬಗ್ಗೆ ನಿಗಾವಹಿಸಲಿರುವ ನಗರದ ಎಂಟು ವಿಭಾಗಗಳ ಡಿಸಿಪಿಗಳ ಟ್ವಿಟ್ಟರ್, ಇ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ,'' ಎಂದರು.
''ಬಿಬಿಎಂಪಿ ಹೊಸ ಜಾಹೀರಾತು ನೀತಿ ಮತ್ತು ಬೈಲಾ ಕುರಿತಂತೆ, ಬಿಬಿಎಂಪಿ ವಕೀಲರು ಪಾಲಿಕೆ ಸಲ್ಲಿಸಿದ್ದ ಕರಡು ನೀತಿಗೆ ಸರಕಾರ ಕೆಲವೊಂದು ಸ್ಪಷ್ಟಣೆಗಳನ್ನು ಕೋರಿತ್ತು. ಅವುಗಳನ್ನು ಅಗತ್ಯ ವಿವರಣೆಯೊಂದಿಗೆ ಶುಕ್ರವಾರ ಸಂಜೆಯೊಳಗೆ ಸರಕಾರಕ್ಕೆ ಸಲ್ಲಿಸಲಾಗುವುದು,'' ಎಂದು ಹೇಳಿದರು.
ಆ ಹಿನ್ನೆಲೆಯಲ್ಲಿ ನ್ಯಾಯಾಲಯ ಅನಧಿಕೃತ ಹೋರ್ಡಿಂಗ್ ಮತ್ತು ಜಾಹೀರಾತುಗಳ ಕುರಿತಾದ ಪಿಐಎಲ್ಗಳ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.
ಪ್ಲಾಸ್ಟಿಕ್ ನಿಷೇಧವಿದ್ದರೂ ಸಹ ಹೇಗೆ ಪ್ಲಾಸ್ಟಿಕ್ನಿಂದ ಮಾಡಿದ ಧ್ವಜಗಳನ್ನು ಇತ್ತೀಚೆಗೆ ನಡೆದ ಪಕ್ಷದ ರ್ಯಾಲಿಯಲ್ಲಿ ಬಳಕೆ ಮಾಡಿರುವುದು ಆಶ್ಚರ್ಯ ಮೂಡಿಸುತ್ತದೆ. ಆದರೆ ಇಷ್ಟೆಲ್ಲಾ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಏಕೆ ಏನೂ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಗಂಭೀರ ಕ್ರಮ ಜುರುಗಿಸಬೇಕಾಗುತ್ತದೆ ಎಂದು ಹಂಗಾಮಿ ಸಿಜೆ ಎಲ್.ನಾರಾಯಣಸ್ವಾಮಿ ಅವರಿದ್ದ ನ್ಯಾಯಪೀಠ ಹೇಳಿದೆ.
ನಗರದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ ಕುರಿತಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಆಲಿಸುತ್ತಿರುವ ನ್ಯಾಯಪೀಠ, ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸದೆ ತರಾಟೆಗೆ ತೆಗೆದುಕೊಂಡಿತಲ್ಲದೆ, ಏನೂ ಕ್ರಮ ಕೈಗೊಳ್ಳದ ಪಾಲಿಕೆ ಕ್ರಮವನ್ನು ಖಾರವಾಗಿ ಪ್ರಶ್ನಿಸಿತು.
ಯಾವ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ರ್ಯಾಲಿ ಹೆಸರಿನಲ್ಲಿ ನಿಷೇಧಿಸಲ್ಪಟ್ಟಿರುವ ಪ್ಲಾಸ್ಟಿಕ್ ಬಳಕೆ ಮಾಡುತ್ತಾರೋ ಅಂತಹವರ ವಿರುದ್ಧ ಕ್ರಮ ಕೈಗೊಂಡಿಲ್ಲವೇಕೆ ಎಂದೂ ಸಹ ಪ್ರಶ್ನಿಸಿತು.
ಪಾಲಿಕೆ ಪರ ವಕೀಲರು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆದರೆ ನ್ಯಾಯಪೀಠ, ಬಿಬಿಎಂಪಿ ಸಂಬಂಧಿಸಿದವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಸೂಚನೆ ನೀಡಿತು.
148 ಪ್ರಕರಣ: ಈ ಮಧ್ಯೆ, ಸರಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ 2018ರ ಡಿ.8ರಿಂದ 2019ರ ಫೆ.5ರವರೆಗೆ ಒಟ್ಟು 148 ಪ್ರಕರಣಗಳನ್ನು ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯಿದೆ ಅಡಿ ದಾಖಲಿಸಲಾಗಿದೆ. ಅವುಗಳಲ್ಲಿ 10 ಮಂದಿಗೆ ಶಿಕ್ಷೆಯಾಗಿದೆ ಮತ್ತು 64 ಪ್ರಕರಣಗಳ ಬಗ್ಗೆ ವಿಚಾರಣೆ ನಡೆದಿದೆ ಎಂದು ಹೇಳಿದೆ.
ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ, ''ಅನಧಿಕೃತ ಜಾಹೀರಾತುಗಳ ಬಗ್ಗೆ ನಿಗಾವಹಿಸಲಿರುವ ನಗರದ ಎಂಟು ವಿಭಾಗಗಳ ಡಿಸಿಪಿಗಳ ಟ್ವಿಟ್ಟರ್, ಇ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ,'' ಎಂದರು.
''ಬಿಬಿಎಂಪಿ ಹೊಸ ಜಾಹೀರಾತು ನೀತಿ ಮತ್ತು ಬೈಲಾ ಕುರಿತಂತೆ, ಬಿಬಿಎಂಪಿ ವಕೀಲರು ಪಾಲಿಕೆ ಸಲ್ಲಿಸಿದ್ದ ಕರಡು ನೀತಿಗೆ ಸರಕಾರ ಕೆಲವೊಂದು ಸ್ಪಷ್ಟಣೆಗಳನ್ನು ಕೋರಿತ್ತು. ಅವುಗಳನ್ನು ಅಗತ್ಯ ವಿವರಣೆಯೊಂದಿಗೆ ಶುಕ್ರವಾರ ಸಂಜೆಯೊಳಗೆ ಸರಕಾರಕ್ಕೆ ಸಲ್ಲಿಸಲಾಗುವುದು,'' ಎಂದು ಹೇಳಿದರು.
ಆ ಹಿನ್ನೆಲೆಯಲ್ಲಿ ನ್ಯಾಯಾಲಯ ಅನಧಿಕೃತ ಹೋರ್ಡಿಂಗ್ ಮತ್ತು ಜಾಹೀರಾತುಗಳ ಕುರಿತಾದ ಪಿಐಎಲ್ಗಳ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.