ಆ್ಯಪ್ನಗರ

ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇಗುಲ ಹಸ್ತಾಂತರ ಆದೇಶ ರದ್ದು

ಗೋಕರ್ಣದ ಐತಿಹಾಸಿಕ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿದ್ದ ಸರಕಾರದ ಆದೇಶವನ್ನು ಹೈಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.

Vijaya Karnataka Web 10 Aug 2018, 9:02 pm
ಬೆಂಗಳೂರು: ಗೋಕರ್ಣದ ಐತಿಹಾಸಿಕ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿದ್ದ ಸರಕಾರದ ಆದೇಶವನ್ನು ಹೈಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.
Vijaya Karnataka Web Gokarna temple


ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅರವಿಂದ್ ಕುಮಾರ್ ಅವರಿದ್ದ ಜಂಟಿ ಪೀಠ ಈ ತೀರ್ಪು ನೀಡಿದೆ. 2008ರ ಆಗಸ್ಟ್ 12ರಂದು ಅಂದಿನ ಬಿಎಸ್‌ ಯಡಿಯೂರಪ್ಪ ಸರಕಾರ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು.

ಜತೆಗೆ ದೇವಾಲಯವನ್ನು ಮುಜರಾಯಿ ಇಲಾಖೆ ಪಟ್ಟಿಯಿಂದ ಕೈಬಿಟ್ಡಿದ್ದ ಸರಕಾರದ ಆದೇಶವನ್ನು ಕೂಡ ಹೈಕೋರ್ಟ್‌ ರದ್ದುಗೊಳಿಸಿದೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ದೇವಾಲಯವನ್ನು ವಶಕ್ಕೆ ತೆಗೆದುಕೊಂಡು ಉಸ್ತುವಾರಿ ನೋಡಿಕೊಳ್ಳಲು ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ರಾಮಚಂದ್ರಾಪುರ ಮಠದ ವಕೀಲರು ಕೋರಿಕೆ ವ್ಯಕ್ತಪಡಿಸಿದ್ದಾರೆ. ಆದರೆ ಅದಕ್ಕೆ ಅರ್ಜಿದಾರರ ವಕೀಲರ ವಿರೋಧ ವ್ಯಕ್ತವಾಗಿದೆ.

ಈ ಕುರಿತು ರಾಮಚಂದ್ರಾಪುರದ ವತಿಯಿಂದ ಸ್ಪಷ್ಟನೆ ಕೂಡ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ