ಆ್ಯಪ್ನಗರ

ಆಂಬ್ಯುಲೆನ್ಸ್‌ ನಿರ್ವಹಣೆಗೆ ಹೈಟೆಕ್‌ ತಂತ್ರಜ್ಞಾನ: ಹೈಕೋರ್ಟ್‌ಗೆ ಸರಕಾರ ಮಾಹಿತಿ

ಆಂಬ್ಯುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಹೈಟೆಕ್‌ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿಗೆ ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರಕಾರ ಮಾಹಿತಿ ನೀಡಿದೆ. ಈ ನಿರ್ವಹಣಾ ವ್ಯವಸ್ಥೆಗಾಗಿ 1,800 ಕೋಟಿ ರೂ. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ.

Vijaya Karnataka Web 3 Sep 2020, 7:03 am
ಬೆಂಗಳೂರು: ಸಂಚಾರ ದಟ್ಟಣೆ ಮಧ್ಯೆ ಆಂಬ್ಯುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ನಿರ್ವಹಣಾ ವ್ಯವಸ್ಥೆ ಜಾರಿಗೆ ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web ಆಂಬ್ಯುಲೆನ್ಸ್
ಸಾಂದರ್ಭಿಕ ಚಿತ್ರ


ಭಾರತ್‌ ಪುನರುತ್ಥಾನ ಟ್ರಸ್ಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮನವಿ ಆಲಿಸಿದ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠಕ್ಕೆ ಸರಕಾರ ಬುಧವಾರ ಈ ಮಾಹಿತಿ ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, "ಟೆಂಡರ್‌ ಪ್ರಕ್ರಿಯೆ ಮೂಲಕವೇ ಯೋಜನೆ ಕಾರ್ಯಗತಗೊಳಿಸಬೇಕಾಗುತ್ತದೆ. ಅದಕ್ಕೆ 5 ತಿಂಗಳು ಸಮಯಬೇಕೆಂದು ಸರಕಾರ ಹೇಳುತ್ತಿದೆ. ತುರ್ತು ಸಂದರ್ಭಗಳಲ್ಲಿ ಕಾಯಿದೆಯಿಂದ ವಿನಾಯಿತಿ ನೀಡುವ ಅಧಿಕಾರ ಸರಕಾರಕ್ಕಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಆದರೆ ಈ ಪ್ರಕರಣವನ್ನು ಹೈಕೋರ್ಟ್‌ ಮೇಲ್ವಿಚಾರಣೆ ಮಾಡಲಿದೆ'' ಎಂದು ಹೇಳಿತು.

ಅಲ್ಲದೆ, ಸರಕಾರ ಟೆಂಡರ್‌ ಪ್ರಕ್ರಿಯೆ ನಡೆಸಲಿ. ಟೆಂಡರ್‌ ಪ್ರಕ್ರಿಯೆಯಲ್ಲಿ ಏನೆಲ್ಲಾ ಪ್ರಗತಿ ಆಗಿದೆ ಎಂಬ ಬಗ್ಗೆ ಸೆ.30ಕ್ಕೆ ಅಫಿಡವಿಟ್‌ ಸಲ್ಲಿಸಲಿ ಎಂದು ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು.

ಸರಕಾರಿ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದಾರೆ. ಈ ನಿರ್ವಹಣಾ ವ್ಯವಸ್ಥೆಗಾಗಿ 1,800 ಕೋಟಿ ರೂ. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆದು, ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಟ 5 ತಿಂಗಳು ಸಮಯಾವಕಾಶ ಅಗತ್ಯವಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ