ಆ್ಯಪ್ನಗರ

ರಾಜ್ಯದಲ್ಲಿ ತಾಪಮಾನ ಏರಿಕೆ

ರಾಜ್ಯದಲ್ಲಿ ತಾಪಮಾನ ಏರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.

Vijaya Karnataka 27 Mar 2018, 10:26 am
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ.
Vijaya Karnataka Web weather


ಇತ್ತೀಚೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಾಗ ರಾಜ್ಯದಲ್ಲಿ ತಾಪಮಾನದಲ್ಲಿ ಕುಸಿತವಾಗಿತ್ತು. ಹೀಗಾಗಿ ಮಾರ್ಚ್‌ ಎರಡನೇ ವಾರದಲ್ಲಿ ಹೆಚ್ಚು ಸೆಕೆ ಕಂಡುಬಂದಿರಲಿಲ್ಲ. ಮಳೆ ನಿಂತ ನಂತರ ಬಿಸಿಲಿನ ಆಟ ಆರಂಭವಾಗಿದ್ದು, ದಿನೇದಿನೆ ಸೆಕೆ ಅಧಿಕವಾಗುತ್ತಿದೆ. ಹವಾಮಾನ ಇಲಾಖೆಯ ಸೋಮವಾರದ ಮಾಹಿತಿಯಂತೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಕರಾವಳಿಯ ಎಲ್ಲ ಪ್ರದೇಶಗಳಲ್ಲೂ ಅಧಿಕ ತಾಪಮಾನವಿದೆ.

''ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ 1.5ರಿಂದ 3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲೂ ತಾಪಮಾನವು ವಾಡಿಕೆಗಿಂತ ಸ್ವಲ್ಪ ಏರಿಕೆಯಾಗಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಕರಾವಳಿಯಲ್ಲಿ ಸಮುದ್ರ ಭಾಗದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಸೆಕೆ ಅತಿಯಾಗಿದೆ,'' ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್‌.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಜಿಲ್ಲೆ/ಪ್ರದೇಶ ಮಾ.26ರ ಗರಿಷ್ಠ ತಾಪಮಾನ (ಡಿಗ್ರಿ ಸೆಲ್ಸಿಯಸ್‌)


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ