ಆ್ಯಪ್ನಗರ

HD Kumaraswamy: ದಾಳಿ ನಡೆಸಲು ಐಟಿ ಅಧಿಕಾರಿಗೆ ಸಾಂವಿಧಾನಿಕ ಹುದ್ದೆ ಆಮಿಷ, ಸಿಎಂ ಆರೋಪ

ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿ, ಇದು ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಸರ್ಜಿಕಲ್‌ ದಾಳಿ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Vijaya Karnataka Web 28 Mar 2019, 11:14 am
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ಆಪ್ತರ ಮನೆಗಳ ಮೇಲೆ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿ, ಇದು ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಸರ್ಜಿಕಲ್‌ ದಾಳಿ ಎಂದಿದ್ದಾರೆ.
Vijaya Karnataka Web H D Kumaraswamy


ಪ್ರಧಾನಿ ನರೇಂದ್ರ ಮೋದಿ ಅವರ ದ್ವೇಷ ಸಾಧನೆಗೆ ಸಹಾಯ ಮಾಡಲು ಐಟಿ ಅಧಿಕಾರಿ ಬಾಲಕೃಷ್ಣ ಅವರಿಗೆ ಸಾಂವಿಧಾನಿಕ ಹುದ್ದೆ ಆಮಿಷ ಒಡ್ಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ವಿರೋಧಿಗಳನ್ನು ಹಣಿಯಲು ಭ್ರಷ್ಟಾಚಾರಿ ಅಧಿಕಾರಿಗಳನ್ನು ಕೇಂದ್ರ ಸರಕಾರ ಬಳಕೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.


ಮಂಡ್ಯ ಉಸ್ತುವಾರಿ ಸಚಿವ ಮತ್ತು ಸಣ್ಣ ನೀರಾವರಿ ಸಚಿವ ಸಿ ಎಸ್‌ ಪುಟ್ಟರಾಜು ಮತ್ತು ಅವರ ಸಂಬಂಧಿಕರ ಮನೆ ಮೇಲೆ ಸಿಆರ್‌ಪಿಎಫ್‌ ಯೋಧರ ಭದ್ರತೆಯೊಂದಿಗೆ ಗುರುವಾರ ಬೆಳಗ್ಗೆ 5 ಗಂಟೆಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಹಾಸನದ ಲೋಕೋಪಯೋಗಿ ಕಚೇರಿ ಮೇಲೂ ಐಟಿ ದಾಳಿ ನಡೆದಿದೆ. ಹಾಸನ ಉಸ್ತುವಾರಿ ಸಚಿವ ಎಚ್‌ಡಿ ರೇವಣ್ಣ ಅವರೇ ಲೋಕೋಪಯೋಗಿ ಸಚಿವರಾಗಿರುವ ಹಿನ್ನೆಲೆ ಭಾರಿ ಕುತೂಹಲ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ