ಆ್ಯಪ್ನಗರ

ಪಾದಯಾತ್ರೆಗೆ ಸ್ಥಳೀಯರ ಬೆಂಬಲವಿಲ್ಲ: ಡಿ.ಕೆ. ಶಿವಕುಮಾರ್

ರೈತರ ಸಂಪೂರ್ಣ ಸಾಲ ಮನ್ನಾ ಬೇಡಿಕೆ ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಜನರನ್ನು ದಿಕ್ಕುತಪ್ಪಿಸುವ ಕೆಲಸ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

Vijaya Karnataka Web 29 Jul 2018, 4:00 am
ಬೆಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾ ಬೇಡಿಕೆ ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಜನರನ್ನು ದಿಕ್ಕುತಪ್ಪಿಸುವ ಕೆಲಸ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.
Vijaya Karnataka Web file6xgc7j8oe9vuku39egd


ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ''ಬಿಜೆಪಿಗೆ ಸ್ಥಳೀಯ ರೈತ ಸಮುದಾಯದ ಬೆಂಬಲ ಇಲ್ಲ. ಹೆಗಲ ಮೇಲೆ ಹಸಿರು ಶಾಲು ಹಾಕಿಕೊಂಡವರೆಲ್ಲಾ ರೈತರಲ್ಲ. ಬಿಜೆಪಿಯವರು ಹೊರಗಿನ ಜನರನ್ನು ಕರೆದುಕೊಂಡು ಬಂದು ಪಾದಯಾತ್ರೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ರಾಜ್ಯದ ರೈತರಿಗೆ 10 ರೂ. ನೆರವು ಕೂಡ ಕೊಟ್ಟಿಲ್ಲ. ಬಿಜೆಪಿ ಮಾಡಲಾಗದ ಕೆಲಸವನ್ನು ಜೆಡಿಎಸ್‌ -ಕಾಂಗ್ರೆಸ್‌ ಜೋಡಿ ಸರಕಾರ ಮಾಡಿದೆ. ಬಿಜೆಪಿಯವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ'' ಎಂದು ಟೀಕಿಸಿದರು.

''ಸರ್ಕಾರ ರಚನೆಗೆ ಮುನ್ನವೇ ರೈತರ ಸಾಲ ಮನ್ನಾ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಗಡುವು ನೀಡಿದ್ದರು. ಸಮ್ಮಿಶ್ರ ಸರ್ಕಾರ ರಚನೆಯಾದ ಕೆಲದಿನಗಳಲ್ಲೇ ರೈತರ ಎರಡು ಲಕ್ಷ ದವರೆಗಿನ ಸಾಲವನ್ನು ಮನ್ನಾ ಮಾಡಲಾಗಿದೆ. ಇದು ನಾಡಿನ ರೈತ ಸಮುದಾಯಕ್ಕೆ ಸಂತೋಷ ತಂದಿದೆ. ಕೃಷಿಕರು ಈ ಖುಷಿಯನ್ನೂ ಅನುಭವಿಸಲು ಬಿಡದೆ ಎತ್ತಿಕಟ್ಟುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಸಾಲ ಮನ್ನಾ ತೀರ್ಮಾನವನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು ಒಪ್ಪುವುದಿಲ್ಲ ಎಂದು ಬಿಜೆಪಿ ನಾಯಕರು ತಕರಾರು ತೆಗೆದಿದ್ದರು. ಸರಕಾರ ಬ್ಯಾಂಕ್‌ಗಳನ್ನು ಒಪ್ಪಿಸಿದೆ. ಸರಕಾರದ ಈ ಯಶಸ್ಸು ಮತ್ತು ಒಳ್ಳೆಯ ಕೆಲಸಗಳನ್ನು ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ'' ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ