ಆ್ಯಪ್ನಗರ

Congress Freedom March | ನೆಹರೂ ಚರಿತ್ರೆ ಬದಲಾವಣೆ ಮಾಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

History of Jawaharlal Nehru: ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರದ ನಡಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು. ದೇಶ ಕವಲು ದಾರಿಯಲ್ಲಿದೆ. ಜನರು‌ ಆತಂಕದಿಂದ ಇದ್ದಾರೆ. ಬೆಲೆ ಏರಿಕೆ ಗಗನಕ್ಕೇರಿದೆ. ಚರಿತ್ರೆ ಬದಲಾವಣೆ ಮಾಡಲು ಹೊರಟಿದ್ದಾರೆ. ಆದರೆ, ಅದನ್ನು ಮಾಡಲು ಸಾಧ್ಯವಿಲ್ಲ ಎಂದರು.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 15 Aug 2022, 7:56 pm

ಹೈಲೈಟ್ಸ್‌:

  • ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ ನಡಿಗೆ ಕಾರ್ಯಕ್ರಮದ ಸಮಾರೋಪ
  • ನೆಹರೂ ಕುಟುಂಬದ ಕೊಡುಗೆ ಈ ದೇಶಕ್ಕೆ ಅಪಾರವಾಗಿದೆ
  • ಬಿಜೆಪಿ ವಿರುದ್ಧ ಹರಿಹಾಯ್ದ ಡಿ.ಕೆ.ಶಿವಕುಮಾರ್
  • ಸ್ವಾತಂತ್ರ್ಯದ ನಡಿಗೆಯ ನಮ್ಮ ಕರೆಗೆ ಆನ್‌ಲೈನ್ ನಲ್ಲಿ ಉತ್ತಮ ಸ್ಪಂದನೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DK Shivakumar
ಡಿ.ಕೆ.ಶಿವಕುಮಾರ್
ಬೆಂಗಳೂರು: ಜವಹರಲಾಲ್ ನೆಹರೂ ಅವರ ಕೊಡುಗೆ ಹಾಗೂ ಚರಿತ್ರೆಯನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರದ ನಡಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಹರಿಹಾಯ್ದರು.
Congress Freedom March | ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡಬೇಕಿದೆ: ರಣದೀಪ್ ಸಿಂಗ್ ಸುರ್ಜೇವಾಲ
ದೇಶ ಕವಲು ದಾರಿಯಲ್ಲಿದೆ. ಜನರು‌ ಆತಂಕದಿಂದ ಇದ್ದಾರೆ. ಬೆಲೆ ಏರಿಕೆ ಗಗನಕ್ಕೇರಿದೆ. ಚರಿತ್ರೆ ಬದಲಾವಣೆ ಮಾಡಲು ಹೊರಟಿದ್ದಾರೆ. ಆದರೆ, ಅದನ್ನು ಮಾಡಲು ಸಾಧ್ಯವಿಲ್ಲ ಎಂದರು.

ನೆಹರೂ ಚರಿತ್ರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅವರು ಸರಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಕೈಬಿಟ್ಟಿದ್ದಕ್ಕಾಗಿ ಆಕ್ರೋಶ ವ್ಯಕ್ತಪಡಿಸಿದರು.

ನೆಹರೂ ಕುಟುಂಬದ ಕೊಡುಗೆ ಈ ದೇಶಕ್ಕೆ ಅಪಾರವಾಗಿದೆ. ಆದರೆ, ಅಂತಹ ಕುಟುಂಬದ ಬಗ್ಗೆ ಟೀಕೆ ಮಾಡಲಾಗುತ್ತಿದೆ. ಇದನ್ನು ಕೊನೆ ಮಾಡಲು ಜನರಿಂದ ಮಾತ್ರ ಸಾಧ್ಯ ಎಂದರು.
Congress Freedom March | ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ: ಪ್ರಮುಖ ಹೈಲೈಟ್ಸ್ ಇಲ್ಲಿದೆ
ಸ್ವಾತಂತ್ರ್ಯದ ನಡಿಗೆಯ ನಮ್ಮ ಕರೆಗೆ ಆನ್‌ಲೈನ್ ನಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಒಂದು ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದರು. ಇದು ದಾಖಲೆ ಎಂದರು. ಜನರು ಈ ಸ್ವಾತಂತ್ರದ ನಡಿಗೆಯಲ್ಲಿ ನಡೆಯುವ ಮೂಲಕ ದೇಶಕ್ಕೆ ಹಾಗೂ ಪ್ರಜಾಪ್ರಭುತ್ವಕ್ಕೆ ಶಕ್ತಿ ಕೊಟ್ಟಿದ್ದೀರಿ. ಇದೊಂದು ಸಾರ್ಥಕ ಕ್ಷಣ ಎಂದರು.

ಮೆಟ್ರೋ ತುಂಬಾ ಜನವೋ ಜನ

ಕಾಂಗ್ರೆಸ್ ನಡಿಗೆ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಉಚಿತ ಮೆಟ್ರೋ ಪ್ರಯಾಣಕ್ಕೆ ಕಾಂಗ್ರೆಸ್ ವ್ಯವಸ್ಥೆ ಕಲ್ಪಿಸಿದೆ. ಇದಕ್ಕಾಗಿ ಸುಮಾರು ಒಂದು ಲಕ್ಷ ಟಿಕೆಟ್ ಖರೀದಿ ಮಾಡಿದೆ. ಈ ಹಿನ್ನಲೆಯಲ್ಲಿ ಮೆಟ್ರೋ ನಿಲ್ದಾಣ ತುಂಬಿ ತುಳುಕುತ್ತಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಪ್ರಯಾಣಿಕರು ಮೆಟ್ರೋ ಮೂಲಕ ಪ್ರಯಾಣಿಸಿದರು. ಜನರನ್ನು ನಿಯಂತ್ರಣ ಮಾಡಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ