ಆ್ಯಪ್ನಗರ

ಮಾಜಿ ಸಚಿವ ಎಚ್‌ ಕೆ ಪಾಟೀಲ್‌ಗೆ ಕೊರೊನಾ ಪಾಸಿಟಿವ್ ದೃಢ..!

ನನಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆರೋಗ್ಯವಾಗಿದ್ದೇನೆ. ಮುಂದಿನ ಹತ್ತು ದಿನಗಳ ಕಾಲ ಐಸೋಲೇಶನ್‌ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಒಳಗಾಗಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್ ಮನವಿ ಮಾಡಿದ್ದಾರೆ.

Vijaya Karnataka Web 28 Sep 2020, 12:00 pm
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಕಾಯಿಲೆ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಇತ್ತೀಚೆಗೆ ಜನಸಾಮಾನ್ಯರ ಜೊತೆ ಜನಪ್ರತಿನಿಧಿಗಳಿಗೂ ಕೂಡ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಅನೇಕ ಜನ ರಾಜಕಾರಣಿಗಳು ಕೊರೊನಾಗೆ ಚಿಕಿತ್ಸೆ ಪಡೆದಿದ್ದಾರೆ.
Vijaya Karnataka Web HK Patil


ಈ ಮಧ್ಯೆ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳಲ್ಲಿ ಹೆಚ್ಚಾಗಿ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದು, ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಎಚ್‌ಕೆ ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರೋದು ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಸಾಕಷ್ಟು ಆತಂಕ ಮೂಡಿಸುವಂತೆ ಮಾಡಿದೆ.

ರೈತರಿಗೆ ಮರಣ ಶಾಸನವಾಗಲಿರುವ ಮಸೂದೆಗಳ ವಿರುದ್ಧ ನಡೆಯುವ ಬಂದ್‌ಗೆ ನನ್ನ

ತಮಗೆ ಕೊರೊನಾ ಸಾಂಕ್ರಾಮಿಕ ರೋಗ ತಗುಲಿರುವ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಎಚ್‌ಕೆ ಪಾಟೀಲ್, ನನಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆರೋಗ್ಯವಾಗಿದ್ದೇನೆ. ಮುಂದಿನ ಹತ್ತು ದಿನಗಳ ಕಾಲ ಐಸೋಲೇಶನ್‌ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಏನಿದು ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ, ರೈತರ ಆತಂಕಕ್ಕೆ ಕಾರಣ ಏನು?

ಇತ್ತೀಚೆಗೆ ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರ ಜೊತೆ ರಾಜಕಾರಣಿಗಳಲ್ಲೂ ಕೂಡ ಕೊರೊನಾ ಸೋಂಕು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸೇರಿದಂತೆ ಅನೇಕ ಜನ ಶಾಸಕರು, ಸಚಿವರುಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇನ್ನೊಂದೆಡೆ ಇತ್ತೀಚೆಗೆ ಲೋಕಸಭಾ ಕಲಾಪ ಆರಂಭಕ್ಕೂ ಮುನ್ನ ಸಂಸತ್‌ನಲ್ಲಿ ಪಾಲ್ಗೊಳ್ಳಲು ಬಂದ 25ಕ್ಕೂ ಹೆಚ್ಚು ಸಂಸದರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ