ಆ್ಯಪ್ನಗರ

ಇಂದು ಎಚ್ಕೆಪಿಯಿಂದ ರಾಹುಲ್‌ ಭೇಟಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಸಾದ ಬೆನ್ನಲ್ಲೇ ಕಾಂಗ್ರೆಸ್‌ ...

Vijaya Karnataka 20 Jun 2019, 5:00 am
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಸಾದ ಬೆನ್ನಲ್ಲೇ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಅವರು ಗುರುವಾರ ರಾಹುಲ್‌ ಅವರನ್ನು ಭೇಟಿಯಾಗಲಿದ್ದಾರೆ.
Vijaya Karnataka Web hk


ಕಳೆದ ಎರಡು ದಿನಗಳಿಂದ ದಿಲ್ಲಿಯಲ್ಲಿರುವ ಪಾಟೀಲ್‌ ಅವರು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕೇಂದ್ರದ ಮಾಜಿ ಸಚಿವರಾದ ಎ.ಕೆ.ಆ್ಯಂಟನಿ, ಗುಲಾಂನಬಿ ಆಜಾದ್‌ ಅವರನ್ನು ಭೇಟಿಯಾಗಿ ರಾಜ್ಯದ ವಿದ್ಯಮಾನಗಳ ಬಗ್ಗೆ ಗಮನ ಸೆಳೆದಿದ್ದಾರೆ. ವಿಶೇಷವಾಗಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ಕಾರ್ಯವೈಖರಿ, 3667 ಎಕರೆ ಭೂಮಿಯಲ್ಲಿ ಬಳ್ಳಾರಿಯಲ್ಲಿ ಜಿಂದಾಲ್‌ ಕಂಪನಿಗೆ ಮಾರಾಟ ಮಾಡಲು ಹೊರಟಿರುವ ಸರಕಾರದ ತೀರ್ಮಾನದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಅನುಮಾನಗಳು, ಪಕ್ಷಕ್ಕೆ ಆಗಿರುವ ಹಾನಿ, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲು ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ