ಆ್ಯಪ್ನಗರ

ಕರ್ನಾಟಕದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ

ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದು ಹಾಕಿದ್ದ ಪಾಪಿ ತಂದೆ

Vijaya Karnataka Web 22 Nov 2017, 6:14 pm
ತುಮಕೂರು: ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಾಗಿದ್ದ ಮರ್ಯಾದಾ ಹತ್ಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಈ ಹಿಂದೆ ಹಲವಾರು ಯುವ ಪ್ರೇಮಿಗಳು ಈ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದಾರೆ. ಈಗ ಮತ್ತೊಂದು ಪ್ರಕರಣ ವರದಿಯಾಗಿದೆ.
Vijaya Karnataka Web honour killing in karnataka father kills daughter
ಕರ್ನಾಟಕದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ


ತ್ಯಾಮಗೊಂಡ್ಲು ಹೋಬಳಿಯ ಲಕ್ಕಪ್ಪನಹಳ್ಳಿಯಲ್ಲಿ ಅನ್ಯಜಾತಿಯ ಯುವಕನೊಂದಿಗೆ ಪ್ರೀತಿಸಿ ಮನೆಬಿಟ್ಟು ಹೋಗಿದ್ದ ಹುಡುಗಿ ಲಕ್ಷ್ಮೀದೇವಿಯನ್ನು ತಂದೆ ಚಿಕ್ಕ ನರಸಿಂಹಯ್ಯ ಮರ್ಯಾದೆ ಹತ್ಯೆ ಮಾಡಿದ್ದಾನೆ .

ಕಳೆದ 20 ದಿನಗಳ ಹಿಂದೆ ಯುವಕ ಲಕ್ಷ್ಮೀನಾರಾಯಣನ ಜೊತೆಯಲ್ಲಿ ಮನೆ ಬಿಟ್ಟು ಹೋಗಿದ್ದ ಲಕ್ಷ್ಮೀದೇವಿಯನ್ನು ಮತ್ತೆ ಹುಡುಕಿ ಕರೆದುಕೊಂಡು ಬಂದು ಮನೆಯಲ್ಲಿ ಕೂಡಿ ಹಾಕಿ ಅಪ್ಪ ಚೆನ್ನಾಗಿ ಹೊಡೆದಿದ್ದಾರೆ. ಇದೇ ಕಾರಣಕ್ಕಾಗಿ ಆಕೆ ವಿಷ ಸೇವಿಸಿದ್ದಾಳೆ.

ಇದರಿಂದ ಆಕೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು. ಇಷ್ಟಕ್ಕೆ ಬಿಡದ ಪೋಷಕರು ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಈ ಘಟನೆ ಈಗ ಬೆಳಕಿಗೆ ಬಂದಿದೆ.

ಎಸ್.ಪಿ ಅಮರ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ವಿನ ತನಿಖೆ ನಡೆಸುತ್ತಿದ್ದಾರೆ.

ಲಕ್ಷ್ಮೀದೇವಿ ಮಂಡಿಗೆರೆ ಗ್ರಾಮದ ಸರ್ಕಾರಿ ಹೈಸ್ಕೂಲ್ ನಲ್ಲಿ ಹತ್ತನೆ ತರಗತಿಯಲ್ಲಿ ಓದುತ್ತಿದ್ದಳು. ಲಕ್ಷ್ಮೀದೇವಿ ಒಕ್ಕಲಿಗ ಕೋಮಿಗೆ ಸೇರಿದ್ದರೆ ಯುವಕ ಲಕ್ಷ್ಮೀನಾರಾಯಣ ಭೋವಿ ಜನಾಂಗದವನು.

ಅರೋಪಿ ತಂದೆ ಚಿಕ್ಕ ನರಸಿಂಹಯ್ಯನನ್ನು ಪೋಲಿಸರ್ ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ.

Honour Killing in Karnataka: Father Kills Daughter

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ