ಆ್ಯಪ್ನಗರ

ಶರತ್‌ ಬಚ್ಚೇಗೌಡ ಜತೆಗೆ ನಾವಿದ್ದೇವೆ: ಸಿದ್ದರಾಮಯ್ಯ ಭರವಸೆ

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಸರಕಾರ ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ ನಾವು ಕೈಜೋಡಿಸಲಿದ್ದೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Vijaya Karnataka Web 25 Feb 2021, 2:15 pm
ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಶರತ್ ಬಚ್ಚೇಗೌಡ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದಂತಾಗಿದೆ.
Vijaya Karnataka Web sharath bachegowda


ಶರತ್ ಬಚ್ಚೇಗೌಡ ಅವರು ಇಂದು ನನ್ನನ್ನು ಭೇಟಿಯಾಗಿ, ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. ಈ ವೇಳೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೊತೆಗೂಡಿ ಶರತ್ ಬಚ್ಚೇಗೌಡ ಅವರಿಗೆ ಅಭಿನಂದನೆ ಸಲ್ಲಿಸಿದೆವು. ಬಿಜೆಪಿ ಸರಕಾರ ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ ನಾವು ಕೈಜೋಡಿಸಲಿದ್ದೇವೆ ಎಂದು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಣೆ ಮಾಡಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾದ ಶರತ್ ಬಚ್ಚೇಗೌಡ ಅವರು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧದ ತಮ್ಮ ಹೋರಾಟಗಳಿಗೆ ಕಾಂಗ್ರೆಸ್‌ನ ಬೆಂಬಲ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಶರತ್ ಬಚ್ಚೇಗೌಡ ಅವರು ಮತ್ತು ನಾವು ಒಟ್ಟಾಗಿ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದೇವೆ.

ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಅಲ್ಲಿನ ಶಾಸಕರೇ ವಹಿಸಿಕೊಳ್ಳಬೇಕು. ಆದರೆ ಹೊಸಕೋಟೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ.

ಫೆ.25ಕ್ಕೆ ಶರತ್ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ; ಪಕ್ಷ ಬಲವರ್ಧನೆಗೆ ಸಹಕರಿಸುವಂತೆ ಮನವಿ ಮಾಡಿದ ಶಾಸಕ

ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುವ ಜೊತೆಗೆ, ಹೊಸಕೋಟೆಯಲ್ಲಿ ನಡೆಯುತ್ತಿರುವ ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ ನಾವು ಕೈಜೋಡಿಸಲಿದ್ದೇವೆ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಶರತ್ ಬಚ್ಚೇಗೌಡ ಅವರ ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಹಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ