ಆ್ಯಪ್ನಗರ

Bharat Jodo Yatra | ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭದ್ರತೆ ಹೇಗಿದೆ?

ರಾಹುಲ್ ಗಾಂಧಿ ಸುತ್ತ ಖಾಕಿ ಸರ್ಪಗಾವಲು ಇದ್ದು, ಜೆಡ್ ಪ್ಲಸ್ ಭದ್ರತೆಯಲ್ಲಿ ರಾಹುಲ್ ಪಾದಯಾತ್ರೆ ಸಾಗುತ್ತಿದೆ. ಅಲ್ಲದೆ ರಾಜ್ಯದ ಪೊಲೀಸ್ ಇಲಾಖೆಯಿಂದ ಕೂಡ ಬಾರಿ ಭದ್ರತೆ ಕಲ್ಪಿಸಲಾಗಿದೆ. 200 ಮೀಟರ್ ದೂರದವರೆಗೆ ಯಾರನ್ನೂ ಪೊಲೀಸರು ಬಿಡುತ್ತಿಲ್ಲ.‌ 200 ಮೀಟರ್ ದೂರದಿಂದಲೇ ಜನರನ್ನು ನಿಯಂತ್ರಣ ಮಾಡಲಾಗುತ್ತಿದೆ. ಅನುಮತಿ ಇಲ್ಲದೆ ಯಾವುದೇ ನಾಯಕರಿಗೆ ಈ ಸರ್ಕಲ್ ನಲ್ಲಿ ಪ್ರವೇಶವಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾತ್ರ ರಾಹುಲ್ ಜೊತೆ ಹೆಜ್ಜೆ ಹಾಕಲು ಅವಕಾಶ ಇದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 1 Oct 2022, 11:12 am

ಹೈಲೈಟ್ಸ್‌:

  • ಕಾಂಗ್ರೆಸ್ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಭದ್ರತೆ
  • 200 ಮೀಟರ್ ದೂರದಿಂದಲೇ ಜನರನ್ನು ನಿಯಂತ್ರಣ
  • ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾತ್ರ ರಾಹುಲ್ ಜೊತೆ ಹೆಜ್ಜೆ ಹಾಕಲು ಅವಕಾಶ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bharat jodo yatra
ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರಿ ಭದ್ರತೆ ನೀಡಲಾಗಿದೆ. ರಾಹುಲ್ ನಡೆಯುವ ದಾರಿಯಲ್ಲಿ ಪೂರ್ಣ ಪ್ರಮಾಣದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
200 ಮೀಟರ್ ದೂರದವರೆಗೆ ಯಾರನ್ನೂ ಪೊಲೀಸರು ಬಿಡುತ್ತಿಲ್ಲ.‌ 200 ಮೀಟರ್ ದೂರದಿಂದಲೇ ಜನರನ್ನು ನಿಯಂತ್ರಣ ಮಾಡಲಾಗುತ್ತಿದೆ. ಅನುಮತಿ ಇಲ್ಲದೆ ಯಾವುದೇ ನಾಯಕರಿಗೆ ಈ ಸರ್ಕಲ್ ನಲ್ಲಿ ಪ್ರವೇಶವಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾತ್ರ ರಾಹುಲ್ ಜೊತೆ ಹೆಜ್ಜೆ ಹಾಕಲು ಅವಕಾಶ ಇದೆ.

ರಾಹುಲ್ ಗಾಂಧಿ ಸುತ್ತ ಖಾಕಿ ಸರ್ಪಗಾವಲು ಇದ್ದು, ಜೆಡ್ ಪ್ಲಸ್ ಭದ್ರತೆಯಲ್ಲಿ ರಾಹುಲ್ ಪಾದಯಾತ್ರೆ ಸಾಗುತ್ತಿದೆ. ಅಲ್ಲದೆ ರಾಜ್ಯದ ಪೊಲೀಸ್ ಇಲಾಖೆಯಿಂದ ಕೂಡ ಬಾರಿ ಭದ್ರತೆ ಕಲ್ಪಿಸಲಾಗಿದೆ.

Bharat Jodo Yatra | ಮೈಸೂರು ಜಿಲ್ಲೆಗೆ ಭಾರತ್ ಜೋಡೋ ಯಾತ್ರೆ ಎಂಟ್ರಿ, ರಾಹುಲ್ ಸ್ಪೀಡ್‍ಗೆ ಸಿದ್ದರಾಮಯ್ಯ, ಡಿಕೆಶಿ ಡಲ್
ಅಂದಹಾಗೆ ಭಾರತ್ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ತುಂತುರು ಮಳೆ ಕಾರಣಕ್ಕೆ ಪಾದಯಾತ್ರೆ ಸ್ವಲ್ಪ ತಡವಾಗಿ ಶುರುವಾಗಿದೆ. ಬೆಳಗ್ಗೆ 6.30 ಗೆ ಆರಂಭವಾಗಬೇಕಾಗಿದ್ದ ಪಾದಯಾತ್ರೆ 7.40 ಕ್ಕೆ ಆರಂಭವಾಯಿತು. ಮೊದಲ ದಿನದ ಯಾತ್ರೆ ಸಕ್ಸಸ್ ಆದ ಹಿನ್ನಲೆಯಲ್ಲಿಹುಮ್ಮಸ್ಸಿನಲ್ಲೇ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕುತ್ತಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಚಾಮರಾಜನಗರದಿಂದ ಮೈಸೂರು ನಗರಕ್ಕೆ ಎಂಟ್ರಿ ಕೊಟ್ಟಿದೆ. ಶನಿವಾರ 24 ಕಿ.ಮೀ ಪಾದಯಾತ್ರೆ ನಡೆಯಲಿದೆ. ಚಾಮರಾಜನಗರ ಜಿಲ್ಲೆಯಿಂದ ಮೈಸೂರಿಗೆ ಎಂಟ್ರಿ ಪಡೆದುಕೊಳ್ಳುತ್ತಿದ್ದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಪಾದಯಾತ್ರೆಯಲ್ಲಿ ಉತ್ಸಾಹದಿಂದ ರಾಹುಲ್ ಗಾಂಧಿ, ಸಿದ್ದು, ಡಿಕೆಶಿ, ಎಂ.ಬಿ. ಪಾಟೀಲ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ. ಮೈಸೂರು ಜಿಲ್ಲೆ ಪ್ರವೇಶ ಮಾಡುತ್ತಿದ್ದಂತೆ ಪಾದಯಾತ್ರೆಗೆ ಅದ್ಧೂರಿ ಸ್ವಾಗತ ಮಾಡಲಾಯಿತು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ