ಆ್ಯಪ್ನಗರ

ಕಾಂಗ್ರೆಸ್‌ಗೆ ಸಾಂಗ್ಲಿಯಾನ ರಾಜೀನಾಮೆ

ಕಾಂಗ್ರೆಸ್‌ನಲ್ಲಿ ಕ್ರೈಸ್ತರನ್ನು ವೋಟ್‌ಬ್ಯಾಂಕ್‌ ಆಗಿ ಬಳಸಿಕೊಳ್ಳಲಾಗುತ್ತಿದೆ. ಪಕ್ಷ ಮತ್ತು ಸರಕಾರದಲ್ಲಿ ಪ್ರಮುಖ ಸ್ಥಾನಮಾನ ಕೊಡುವಾಗ ಕಡೆಗಣಿಸಲಾಗುತ್ತಿದೆ. ಇದು ಖಂಡನೀಯವೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Vijaya Karnataka Web 8 Apr 2019, 10:30 pm
ಬೆಂಗಳೂರು : ಕ್ರೈಸ್ತರಿಗೆ ಲೋಕಸಭೆ ಚುನಾವಣೆ ಟಿಕೆಟ್‌ ನೀಡದಿರುವುದನ್ನು ಪ್ರತಿಭಟಿಸಿ ಪ್ರದೇಶ ಕಾಂಗ್ರೆಸ್‌ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ರಾಜೀನಾಮೆ ಸಲ್ಲಿಸಿದ್ದಾರೆ.
Vijaya Karnataka Web ಸಾಂಗ್ಲಿಯಾನ
ಸಾಂಗ್ಲಿಯಾನ


ಕಾಂಗ್ರೆಸ್‌ನಲ್ಲಿ ಕ್ರೈಸ್ತರನ್ನು ವೋಟ್‌ಬ್ಯಾಂಕ್‌ ಆಗಿ ಬಳಸಿಕೊಳ್ಳಲಾಗುತ್ತಿದೆ. ಪಕ್ಷ ಮತ್ತು ಸರಕಾರದಲ್ಲಿ ಪ್ರಮುಖ ಸ್ಥಾನಮಾನ ಕೊಡುವಾಗ ಕಡೆಗಣಿಸಲಾಗುತ್ತಿದೆ. ಇದು ಖಂಡನೀಯವೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

''ವೈಯಕ್ತಿಕವಾಗಿ ಅಣು ಒಪ್ಪಂದದ ಸಂದರ್ಭದಲ್ಲಿ ದೇಶದ ಹಿತದೃಷ್ಟಿಯಿಂದ ನಾನು ಸಂಸತ್ತಿನಲ್ಲಿ ಕಾಂಗ್ರೆಸ್‌ ಪರ ಮತ ಚಲಾಯಿಸಿದ್ದೆ. ನಂತರ ಕಾಂಗ್ರೆಸ್‌ ಪಕ್ಷವನ್ನೇ ಸೇರಿಕೊಂಡೆ. ಪಕ್ಷದ ಸಂಘಟನೆಗೂ ಸಾಕಷ್ಟು ಕೊಡುಗೆ ಸಲ್ಲಿಸಿದ್ದೇನೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ಕಾಂಗ್ರೆಸ್‌ ನನ್ನ ಅನುಭವ, ತಜ್ಞತೆಯನ್ನು ಬಳಸಿಕೊಂಡಿದೆ,'' ಎಂದು ಹೇಳಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ಕ್ರೈಸ್ತ ಬಾಂಧವರು ಸಮರ್ಥ ಅಭ್ಯರ್ಥಿಗಳಿಗೆ ಬೆಂಬಲಿಸಬೇಕು. ಪಕ್ಷ ಮತ್ತು ಜಾತಿಯನ್ನು ಈ ವಿಚಾರದಲ್ಲಿ ನೋಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ