ಆ್ಯಪ್ನಗರ

ಇಂದು ಹುಬ್ಬಳ್ಳಿಯಲ್ಲಿ ಅಮಿತ್‌ ಶಾ ಮಠ ಯಾತ್ರೆ

ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಧಾರವಾಡ ಮತ್ತು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ

Vijaya Karnataka 12 Apr 2018, 6:30 am
ಹುಬ್ಬಳ್ಳಿ: ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಧಾರವಾಡ ಮತ್ತು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ದ ನಾಯಕ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.
Vijaya Karnataka Web hubli shah visit
ಇಂದು ಹುಬ್ಬಳ್ಳಿಯಲ್ಲಿ ಅಮಿತ್‌ ಶಾ ಮಠ ಯಾತ್ರೆ


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಹುಬ್ಬಳ್ಳಿ ಸಿದ್ದಾರೂಢಸ್ವಾಮಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಧಾರವಾಡದ ಸಾಧನಕೇರಿಯಲ್ಲಿರುವ ವರಕವಿ ದ.ರಾ.ಬೇಂದ್ರೆಯವರ ಸ್ಮಾರಕಕ್ಕೆ ಗೌರವ ಸಲ್ಲಿಸಲಿದ್ದಾರೆ.

ನಂತರ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗದಗ ಜಿಲ್ಲೆಯ ರೋಣಗೆ ತಾಲೂಕಿನ ಅಬ್ಬಿಗೇರಿಗೆ ತೆರಳಲಿದ್ದು, ಅಲ್ಲಿ ಮುಷ್ಟಿಧಾನ್ಯ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ'' ಎಂದು ಅವರು ತಿಳಿಸಿದರು. ಜತೆಗೆ, ಮತ್ತೆ ಸಂಜೆ ಹುಬ್ಬಳ್ಳಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶೆಟ್ಟರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ