ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ವಿವಿಧ ಜಿಲ್ಲಾ ಘಟಕಗಳಲ್ಲಿರುವ ಭಿನ್ನಮತ ಶಮನವೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಹಾವೇರಿ, ತುಮಕೂರು, ಶಿವಮೊಗ್ಗ, ಕೋಲಾರ ಸೇರಿದಂತೆ ಅರ್ಧ ಡಜನ್ಗೂ ಹೆಚ್ಚು ಜಿಲ್ಲೆಗಳ ಜಿಲ್ಲಾ ಘಟಕಗಳಲ್ಲಿ ಗುಂಪುಗಾರಿಕೆ ಕಾಣಿಸಿಕೊಂಡಿರುವುದು ಪಕ್ಷ ಸಂಘಟನೆಗೆ ತೊಡಕಾಗಿದೆ. ಅಷ್ಟೇ ಅಲ್ಲ ಕೆಲವು ಜಿಲ್ಲೆಗಳಲ್ಲಿ ಇನ್ನೂ ಬಿಜೆಪಿ- ಕೆಜೆಪಿ ಎಂಬ ಎರಡು ಗುಂಪುಗಳಿದ್ದು, ಜಿಲ್ಲಾ ಘಟಕದೊಂದಿಗೆ ಹೊಂದಾಣಿಕೆ ಇಲ್ಲದ ಕಾರಣ ಚುನಾವಣೆಗಳ ಸಮಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಎರಡೂ ಬಣಗಳನ್ನು ಒಗ್ಗೂಡಿಸಿ ಒಂದೇ ವೇದಿಕೆಯಡಿ ತರುವುದು ಇದುವರೆಗೂ ಸಾಧ್ಯವಾಗಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ ಹಾಗೂ ಆ ನಂತರ ಕಾಣಿಸಿಕೊಂಡಿರುವ ಭಿನ್ನಮತ ದಿನೇದಿನೆ ಜೋರಾಗುತ್ತಿದೆ. ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಹಾಲಿ ಶಾಸಕ ನೆಹರು ಓಲೇಕಾರ್ ಹಾಗೂ ಜಿಲ್ಲಾಧ್ಯಕ್ಷ ಶಿವರಾಜ್ ಸಜ್ಜನ್ ನಡುವಿನ ಭಿನ್ನಮತದಿಂದಾಗಿ ಶಿವರಾಜ್ ಸಜ್ಜನ್ ಈಗಾಗಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಮಸ್ಯೆ ಇನ್ನು ಬಗೆಹರಿದಿಲ್ಲ. ಇನ್ನು ತುಮಕೂರು ಜಿಲ್ಲೆಯಲ್ಲಿ ಮೊದಲಿನಿಂದಲೂ ಬಿಜೆಪಿಯಲ್ಲಿ ಎರಡು ಬಣಗಳಾಗಿವೆ. ಮಾಜಿ ಸಂಸದ ಜಿ.ಎಸ್. ಬಸವರಾಜು ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಇಬ್ಬರು ವಿರುದ್ಧ ದಿಕ್ಕಿನಲ್ಲಿ ನಿಂತಿದ್ದಾರೆ. ತುಮಕೂರು ಹಾಲಿ ಶಾಸಕ ಜ್ಯೋತಿ ಗಣೇಶ್ ಬಸವರಾಜು ಪುತ್ರರಾಗಿದ್ದು ಸ್ಥಳೀಯವಾಗಿ ಸಾಕಷ್ಟು ವಿರೋಧಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿನ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದೇ ಇರುವುದಕ್ಕೆ ಈ ಇಬ್ಬರು ಮಾಜಿಗಳ ನಡುವಿನ ಗುಂಪುಗಾರಿಕೆಯೇ ಸಾಕ್ಷಿ ಎಂದು ಹೇಳಲಾಗುತ್ತಿದೆ.
ಆರಂಭದಿಂದಲೂ ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಸೊಗಡು ಶಿವಣ್ಣ ಅವರನ್ನು ಕರೆಸಿ ಮಾತನಾಡುವ ಸೌಜನ್ಯವನ್ನು ಇದುವರೆಗೂ ಯಡಿಯೂರಪ್ಪ ತೋರಿಲ್ಲ. ಶಿವಣ್ಣ ಜತೆ ಮಾತುಕತೆ ನಡೆಸಲಾಗಿದೆ ಎಂದು ಯಡಿಯೂರಪ್ಪ ಬಹಿರಂಗವಾಗಿ ಹೇಳಿಕೆ ನೀಡಿದ್ದರೂ ವಾಸ್ತವವಾಗಿ ಮಾತುಕತೆಯೇ ಆಗಿಲ್ಲವೆಂದು ಹೇಳಲಾಗುತ್ತಿದೆ. ಇಡೀ ಜಿಲ್ಲೆಯಲ್ಲಿ ಬಿಜೆಪಿ ಅತ್ಯಂತ ದುರ್ಬಲವಾಗಿದೆ. ಪರಿಸ್ಥಿತಿ ಹೀಗಿರುವಾಗ ತುಮಕೂರು ಲೋಕಸಭಾ ಚುನಾವಣೆ ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಬಸವರಾಜು ಹಾಗೂ ಶಿವಣ್ಣ ಒಂದಾಗಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದು ಕಷ್ಟವೇ ಆಗಿರುವುದರಿಂದ ಪಕ್ಷ ಸಂಘಟನೆ ತುಮಕೂರು ಜಿಲ್ಲೆಯಲ್ಲಿ ಅಷ್ಟು ಸುಲಭವಾಗಿಲ್ಲ.
ತ್ರಿಮೂರ್ತಿಗಳ ನಡುವೆ ಫೈಟ್
ಇನ್ನು ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ತ್ರಿಮೂರ್ತಿಗಳ ಫೈಟ್ನಲ್ಲಿ ನಲುಗುತ್ತಿದೆ. ಮೇಲ್ಮನೆ ಮಾಜಿ ಸದಸ್ಯ ಡಿ.ಎಸ್.ವೀರಯ್ಯ, ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಹಾಗೂ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಛಲವಾದಿ ನಾರಾಯಣಸ್ವಾಮಿ ಅವರು ಈಗ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ವೀರಯ್ಯ ಅವರು ಹಲವು ಸಲ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೊಸ ಮುಖಗಳಿಗೆ ಈ ಬಾರಿ ಅವಕಾಶ ಸಿಗಬಹುದೆಂಬ ನಿರೀಕ್ಷೆಯಲ್ಲಿ ರಾಮು- ನಾರಾಯಣಸ್ವಾಮಿ ನಡುವೆ ಪೈಪೋಟಿ ನಡೆದಿದೆ. ಆದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಯಾರೂ ಒತ್ತು ಕೊಡುತ್ತಿಲ್ಲ. ಈ ನಾಯಕರ ಕಿತ್ತಾಟದಿಂದಾಗಿ ಜಿಲ್ಲಾ ಮುಖಂಡರು ಅಸಮಾಧಾನಗೊಂಡಿದ್ದಾರೆ.
ಯಡಿಯೂರಪ್ಪ ಅವರ ಸ್ವಂತ ಜಿಲ್ಲೆ ಶಿವಮೊಗ್ಗವೂ ಭಿನ್ನಮತದಿಂದ ದೂರವಾಗಿಲ್ಲ. ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಗೌಡ ಅವರು ಮೇಲ್ಮನೆ ಸದಸ್ಯರಾದ ಬಳಿಕ ಪಕ್ಷ ಸಂಘಟನೆ ಬಗ್ಗೆ ಅಷ್ಟೊಂದು ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಹಾಗೂ ಸ್ಥಳೀಯ ಶಾಸಕ ಕೆ.ಎಸ್.ಈಶ್ವರಪ್ಪ ನಡುವಿನ ಮುಸುಕಿನ ಗುದ್ದಾಟ ಇನ್ನೂ ನಿಂತಂತೆ ಕಾಣುತ್ತಿಲ್ಲ. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಮತ್ತೆ ಸ್ಪೋಟಗೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸೀಟು ಗೆಲ್ಲುವ ಗುರಿ ಇಟ್ಟುಕೊಂಡಿರುವ ಯಡಿಯೂರಪ್ಪಗೆ ಜಿಲ್ಲಾ ಘಟಕಗಳ ಭಿನ್ನಮತವೇ ತೊಡರುಗಾಲು ಆಗಿದೆ.
ಹಾವೇರಿ, ತುಮಕೂರು, ಶಿವಮೊಗ್ಗ, ಕೋಲಾರ ಸೇರಿದಂತೆ ಅರ್ಧ ಡಜನ್ಗೂ ಹೆಚ್ಚು ಜಿಲ್ಲೆಗಳ ಜಿಲ್ಲಾ ಘಟಕಗಳಲ್ಲಿ ಗುಂಪುಗಾರಿಕೆ ಕಾಣಿಸಿಕೊಂಡಿರುವುದು ಪಕ್ಷ ಸಂಘಟನೆಗೆ ತೊಡಕಾಗಿದೆ. ಅಷ್ಟೇ ಅಲ್ಲ ಕೆಲವು ಜಿಲ್ಲೆಗಳಲ್ಲಿ ಇನ್ನೂ ಬಿಜೆಪಿ- ಕೆಜೆಪಿ ಎಂಬ ಎರಡು ಗುಂಪುಗಳಿದ್ದು, ಜಿಲ್ಲಾ ಘಟಕದೊಂದಿಗೆ ಹೊಂದಾಣಿಕೆ ಇಲ್ಲದ ಕಾರಣ ಚುನಾವಣೆಗಳ ಸಮಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಎರಡೂ ಬಣಗಳನ್ನು ಒಗ್ಗೂಡಿಸಿ ಒಂದೇ ವೇದಿಕೆಯಡಿ ತರುವುದು ಇದುವರೆಗೂ ಸಾಧ್ಯವಾಗಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ ಹಾಗೂ ಆ ನಂತರ ಕಾಣಿಸಿಕೊಂಡಿರುವ ಭಿನ್ನಮತ ದಿನೇದಿನೆ ಜೋರಾಗುತ್ತಿದೆ. ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಹಾಲಿ ಶಾಸಕ ನೆಹರು ಓಲೇಕಾರ್ ಹಾಗೂ ಜಿಲ್ಲಾಧ್ಯಕ್ಷ ಶಿವರಾಜ್ ಸಜ್ಜನ್ ನಡುವಿನ ಭಿನ್ನಮತದಿಂದಾಗಿ ಶಿವರಾಜ್ ಸಜ್ಜನ್ ಈಗಾಗಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಮಸ್ಯೆ ಇನ್ನು ಬಗೆಹರಿದಿಲ್ಲ. ಇನ್ನು ತುಮಕೂರು ಜಿಲ್ಲೆಯಲ್ಲಿ ಮೊದಲಿನಿಂದಲೂ ಬಿಜೆಪಿಯಲ್ಲಿ ಎರಡು ಬಣಗಳಾಗಿವೆ. ಮಾಜಿ ಸಂಸದ ಜಿ.ಎಸ್. ಬಸವರಾಜು ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಇಬ್ಬರು ವಿರುದ್ಧ ದಿಕ್ಕಿನಲ್ಲಿ ನಿಂತಿದ್ದಾರೆ. ತುಮಕೂರು ಹಾಲಿ ಶಾಸಕ ಜ್ಯೋತಿ ಗಣೇಶ್ ಬಸವರಾಜು ಪುತ್ರರಾಗಿದ್ದು ಸ್ಥಳೀಯವಾಗಿ ಸಾಕಷ್ಟು ವಿರೋಧಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚಿನ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದೇ ಇರುವುದಕ್ಕೆ ಈ ಇಬ್ಬರು ಮಾಜಿಗಳ ನಡುವಿನ ಗುಂಪುಗಾರಿಕೆಯೇ ಸಾಕ್ಷಿ ಎಂದು ಹೇಳಲಾಗುತ್ತಿದೆ.
ಆರಂಭದಿಂದಲೂ ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಸೊಗಡು ಶಿವಣ್ಣ ಅವರನ್ನು ಕರೆಸಿ ಮಾತನಾಡುವ ಸೌಜನ್ಯವನ್ನು ಇದುವರೆಗೂ ಯಡಿಯೂರಪ್ಪ ತೋರಿಲ್ಲ. ಶಿವಣ್ಣ ಜತೆ ಮಾತುಕತೆ ನಡೆಸಲಾಗಿದೆ ಎಂದು ಯಡಿಯೂರಪ್ಪ ಬಹಿರಂಗವಾಗಿ ಹೇಳಿಕೆ ನೀಡಿದ್ದರೂ ವಾಸ್ತವವಾಗಿ ಮಾತುಕತೆಯೇ ಆಗಿಲ್ಲವೆಂದು ಹೇಳಲಾಗುತ್ತಿದೆ. ಇಡೀ ಜಿಲ್ಲೆಯಲ್ಲಿ ಬಿಜೆಪಿ ಅತ್ಯಂತ ದುರ್ಬಲವಾಗಿದೆ. ಪರಿಸ್ಥಿತಿ ಹೀಗಿರುವಾಗ ತುಮಕೂರು ಲೋಕಸಭಾ ಚುನಾವಣೆ ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಬಸವರಾಜು ಹಾಗೂ ಶಿವಣ್ಣ ಒಂದಾಗಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದು ಕಷ್ಟವೇ ಆಗಿರುವುದರಿಂದ ಪಕ್ಷ ಸಂಘಟನೆ ತುಮಕೂರು ಜಿಲ್ಲೆಯಲ್ಲಿ ಅಷ್ಟು ಸುಲಭವಾಗಿಲ್ಲ.
ತ್ರಿಮೂರ್ತಿಗಳ ನಡುವೆ ಫೈಟ್
ಇನ್ನು ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ತ್ರಿಮೂರ್ತಿಗಳ ಫೈಟ್ನಲ್ಲಿ ನಲುಗುತ್ತಿದೆ. ಮೇಲ್ಮನೆ ಮಾಜಿ ಸದಸ್ಯ ಡಿ.ಎಸ್.ವೀರಯ್ಯ, ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಹಾಗೂ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಛಲವಾದಿ ನಾರಾಯಣಸ್ವಾಮಿ ಅವರು ಈಗ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ವೀರಯ್ಯ ಅವರು ಹಲವು ಸಲ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೊಸ ಮುಖಗಳಿಗೆ ಈ ಬಾರಿ ಅವಕಾಶ ಸಿಗಬಹುದೆಂಬ ನಿರೀಕ್ಷೆಯಲ್ಲಿ ರಾಮು- ನಾರಾಯಣಸ್ವಾಮಿ ನಡುವೆ ಪೈಪೋಟಿ ನಡೆದಿದೆ. ಆದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಯಾರೂ ಒತ್ತು ಕೊಡುತ್ತಿಲ್ಲ. ಈ ನಾಯಕರ ಕಿತ್ತಾಟದಿಂದಾಗಿ ಜಿಲ್ಲಾ ಮುಖಂಡರು ಅಸಮಾಧಾನಗೊಂಡಿದ್ದಾರೆ.
ಯಡಿಯೂರಪ್ಪ ಅವರ ಸ್ವಂತ ಜಿಲ್ಲೆ ಶಿವಮೊಗ್ಗವೂ ಭಿನ್ನಮತದಿಂದ ದೂರವಾಗಿಲ್ಲ. ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಗೌಡ ಅವರು ಮೇಲ್ಮನೆ ಸದಸ್ಯರಾದ ಬಳಿಕ ಪಕ್ಷ ಸಂಘಟನೆ ಬಗ್ಗೆ ಅಷ್ಟೊಂದು ಆಸಕ್ತಿ ತೋರುತ್ತಿಲ್ಲ ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಹಾಗೂ ಸ್ಥಳೀಯ ಶಾಸಕ ಕೆ.ಎಸ್.ಈಶ್ವರಪ್ಪ ನಡುವಿನ ಮುಸುಕಿನ ಗುದ್ದಾಟ ಇನ್ನೂ ನಿಂತಂತೆ ಕಾಣುತ್ತಿಲ್ಲ. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಮತ್ತೆ ಸ್ಪೋಟಗೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸೀಟು ಗೆಲ್ಲುವ ಗುರಿ ಇಟ್ಟುಕೊಂಡಿರುವ ಯಡಿಯೂರಪ್ಪಗೆ ಜಿಲ್ಲಾ ಘಟಕಗಳ ಭಿನ್ನಮತವೇ ತೊಡರುಗಾಲು ಆಗಿದೆ.