ಆ್ಯಪ್ನಗರ

ದಿಶಾ ಅತ್ಯಾಚಾರಿಗಳ ಎನ್‌ಕೌಂಟರ್; ಕನ್ನಡಿಗ ವಿಶ್ವನಾಥ್ ಸಜ್ಜನರ್‌ಗೆ ರಾಷ್ಟ್ರಪತಿ ಪದಕ ನೀಡಲು ಒತ್ತಾಯ

ಹೈದರಾಬಾದ್ ಪಶು ವೈದ್ಯೆ ದಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿದ ಕನ್ನಡಿಗ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್‌ ಅವರಿಗೆ ರಾಷ್ಟ್ರಪತಿ ಪದಕ ನೀಡಬೇಕು ಎಂಬ ಕೂಗು ಕೇಳಿಬರುತ್ತಿದೆ.

Vijaya Karnataka Web 6 Dec 2019, 7:15 pm
ಬೆಂಗಳೂರು: ದೇಶದ ಗಮನ ಸೆಳೆದ ಹೈದರಾಬಾದ್ ಪಶು ವೈದ್ಯೆ ದಿಶಾ ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿದ ಕನ್ನಡಿಗರಾದ ಸೈಬರಾಬಾದ್ ಪೊಲೀಸ್ ಕಮಿಷನರ್ ವಿಶ್ವನಾಥ್ ಸಜ್ಜನರ್ ಅವರಿಗೆ ರಾಷ್ಟ್ರಪತಿ ಪದಕ ನೀಡುವಂತೆ ಅಖಿಲಭಾರತ ವೀರಶೈವ ಮಹಾಸಭೆ ಯುವ ಘಟಕ ಒತ್ತಾಯಿಸಿದೆ.
Vijaya Karnataka Web hyderabad encounter issue demand president award for police officer vishwanath sajjanar
ದಿಶಾ ಅತ್ಯಾಚಾರಿಗಳ ಎನ್‌ಕೌಂಟರ್; ಕನ್ನಡಿಗ ವಿಶ್ವನಾಥ್ ಸಜ್ಜನರ್‌ಗೆ ರಾಷ್ಟ್ರಪತಿ ಪದಕ ನೀಡಲು ಒತ್ತಾಯ


ಪಶುವೈದ್ಯೆಯ ಮೇಲೆ ಅತ್ಯಾಚಾರಗೈದು ಅಮಾನವಿಯವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಕನ್ನಡಿಗರ ಹೆಮ್ಮೆಯ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ಕಾರ್ಯವನ್ನು ಅಖಿಲಭಾರತ ವೀರಶೈವ ಮಹಾಸಭೆ ಯುವ ಘಟಕದ ಮಾಜಿ ಅಧ್ಯಕ್ಷ ಉಮೇಶ್ ಪಾಟೀಲ್ ಶ್ಲಾಘಿಸಿದ್ದಾರೆ.

ತೆಲಂಗಾಣ ಎನ್‌ಕೌಂಟರ್‌ ನಡೆದ ಸ್ಥಳ ಈಗ ಪ್ರವಾಸಿ ತಾಣವಾಗಿದೆ, ಸಾವಿರಾರು ಜನರ ಭೇಟಿ

ತೆಲಂಗಾಣ ಸರ್ಕಾರದಲ್ಲಿ ಎನ್ ಕೌಂಟರ್ ಸ್ಪೆಷೆಲಿಸ್ಟ್ ಎಂದೇ ಖ್ಯಾತರಾಗುರುವ ವಿಶ್ವನಾಥ್ ಸಜ್ಜನರ್ ಅವರು ಕರ್ನಾಕಟದ ಹುಬ್ಬಳ್ಳಿಯವರು ಎನ್ನುವುದು ನಮ್ಮೆಲ್ಲರ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ದೇಶದ ಎಲ್ಲ ಜನರೂ ಹೆಮ್ಮೆ ಪಡುವಂತೆ ಮಾಡಿರುವ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯ ಸಂದೇಶ ರವಾನೆ ಮಾಡಿ ಸಾಹಸ ಮೆರೆದಿರುವ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರಿಗೆ ರಾಷ್ಟಪತಿ ಪದಕ ನೀಡುವಂತೆ ತೆಲಂಗಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ಅತ್ಯಾಚಾರಿಗಳ ಹತ್ಯೆ ನಡೆದಿದ್ದು ಹೇಗೆ ? ಸಿನಿಮೀಯ ಶೈಲಿಯ ಎನ್‌ಕೌಂಟರ್ ಪೂರ್ಣ ಮಾಹಿತಿ ಇಲ್ಲಿದೆ

ದೇಶವನ್ನೇ ಬೆಚ್ಚಿ ಬೀಳಿಸಿದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಒಂದೇ ವಾರದಲ್ಲಿ ದೇಶದ ಸಾಮಾನ್ಯ ಜನರು ಬಯಸುವ ಶಿಕ್ಷೆ ನೀಡುವ ಮೂಲಕ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ಹಾಗೂ ವೀರಶೈವ ಲಿಂಗಾಯತ ಸಮಾಜದ ಅಭಿಮಾನಕ್ಕೆ ಕಾರಣರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಅತ್ಯಾಚಾರಿಗಳು ಸತ್ತರೂ ಮುಗಿದಿಲ್ಲ ಆಕ್ರೋಶ; ಎನ್‌ಕೌಂಟರ್‌ನಲ್ಲಿ ಹತ್ಯೆಯಾದವರ ಶವ ಹೂಳಲು ವಿರೋಧ

ಇಂತಹ ಸಾಹಸಿ ಅಧಿಕಾರಿಗೆ ರಾಷ್ಟ್ರಪತಿ ಪ್ರಶಸ್ತಿ ಕೊಡಿಸುವ ಮೂಲಕ ತೆಲಂಗಾಣ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಗಳನ್ನು ಪ್ರಾಮಾಣಿಕ ಅಧಿಕಾರಿಯ ಶೌರ್ಯ ಸಾಹಸ ಇತರರಿಗೆ ಪ್ರೇರಣೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದೆ.

ದಿಶಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಮುಂಜಾನೆ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿತ್ತು. ಹೈದರಾಬಾದ್ ಪೊಲೀಸರ ಈ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ. ಎನ್‌ಕೌಂಟರ್‌ ನೇತೃತ್ವ ವಹಿಸಿದ್ದ ಪೊಲೀಸ್ ಆಯುಕ್ತ ಕನ್ನಡಿಗರಾಗಿರುವ ವಿಶ್ವನಾಥ್ ಸಜ್ಜನರ್‌ ಅವರ ನಡೆಗೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ