ಆ್ಯಪ್ನಗರ

ಆತ್ಮರಕ್ಷಣೆಗಾಗಿ ಅತ್ಯಾಚಾರಿಗಳ ಮೇಲೆ ಪೊಲೀಸ್ ಗುಂಡು; ಸಿಎಂ ಬಿಎಸ್‌ವೈ

ಹೈದರಾಬಾದ್ ಪಶು ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬಿಎಸ್‌ವೈ ಆತ್ಮ ರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದಿದ್ದಾರೆ.

Vijaya Karnataka Web 6 Dec 2019, 12:53 pm
ಬೆಂಗಳೂರು: ಹೈದರಾಬಾದ್ ವೈದ್ಯೆ ದಿಶಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ವಿಚಾರಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ಆತ್ನರಕ್ಷಣೆಗಾಗಿ ಪೊಲೀಸರು ಅತ್ಯಾಚಾರಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ ಎನ್‌ಕೌಂಟರ್ ಸಮರ್ಥನೀಯ ಎಂದರು.
Vijaya Karnataka Web hyderabad encounter issue karnataka chief minister reaction
ಆತ್ಮರಕ್ಷಣೆಗಾಗಿ ಅತ್ಯಾಚಾರಿಗಳ ಮೇಲೆ ಪೊಲೀಸ್ ಗುಂಡು; ಸಿಎಂ ಬಿಎಸ್‌ವೈ


ಕಾಮುಕರ ಎನ್‌ಕೌಂಟರ್ ಮಾಡಿದ್ದಕ್ಕೆ ಸ್ಟಾರ್ ನಟ-ನಟಿಯರು ಹೇಳಿದ್ದೇನು?

ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಗೋವಿಂದ ಕಾರಜೋಳ, ಹೈದರಾಬಾದಿನಲ್ಲಿ ಅತ್ಯಾಚಾರಿಗಳ ಎನ್ ಕೌಂಟರ್ ನಡೆಸಿರುವ ಕ್ರಮ ಕಾನೂನು ಪ್ರಕಾರವೇ ನಡೆದಿದೆ. ಮಾಧ್ಯಮಗಳಲ್ಲಿ ಗಮನಿಸಿದಂತೆ ಆರೋಪಿಗಳು ಪೊಲೀಸರ ಮೇಲೆ ತಿರುಗಿಬಿದ್ದಿದ್ದಾರೆ.ಹಾಗಾಗಿ ಅನಿವಾರ್ಯವಾಗಿ ಪೊಲೀಸರು ಗುಂಡುಹಾರಿಸಿದ್ದಾರೆ‌ ಎಂದ ಅವರು ಹೈದರಾಬಾದ್ ಪ್ರಕರಣ ಅತ್ಯಾಚಾರಿಗಳಿಗೆ ಒಂದು ಪಾಠ ಎಂದಿದ್ದಾರೆ.

ದಿಶಾ ಅತ್ಯಾಚಾರಿಗಳ ಎನ್‌ಕೌಂಟರ್; ಗೊತ್ತಿಲ್ಲದೆ ಹೇಗೆ ರಿಯಾಕ್ಟ್‌ ಮಾಡೋದು ಅಂದ್ರು ಸಿದ್ದರಾಮಯ್ಯ

ಹೈದರಬಾದ್ ಪಶು ವೈದ್ಯೆ ದಿಶಾ ಮೇಲೆ ನಾಲ್ವರು ಕಾಮುಕರು ಅಪಹರಿಸಿ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರಕರಣ ನಾಲ್ವರು ಆರೋಪಿಗಳನ್ನು ಬಂಧಿಸಿದ ಹೈದರಬಾದ್ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಮಹಜರು ಕರೆಕೊಂಡು ಹೋಗುತ್ತಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ ಪೊಲೀಸರ ಗನ್ ಕಸಿಯೋದಕ್ಕೆ ಪ್ರಯತ್ನ ಪಟ್ಟಿದ್ದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ