ಆ್ಯಪ್ನಗರ

ಸುಪ್ರೀಂ ಕೋರ್ಟ್‌ಗಿಂತ ದೊಡ್ಡವನಲ್ಲ: ರಮೇಶ್ ಕುಮಾರ್

ಸುಪ್ರೀಂ ಕೋರ್ಟ್ ಮತ್ತು ನನ್ನ ನಡುವೆ ಕದನವಿಲ್ಲ, ನಾನೇನು ನ್ಯಾಯಾಂಗಕ್ಕಿಂತ ದೊಡ್ಡವನಲ್ಲ ಎಂದಿದ್ದಾರೆ ಸ್ಪೀಕರ್

Vijaya Karnataka 17 Jul 2019, 8:20 am
ಕೋಲಾರ: ಸುಪ್ರೀಂ ಕೋರ್ಟ್‌ಗಿಂತ ದೊಡ್ಡವನು ನಾನಲ್ಲ. ಬುಧವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಹೇಳಿದ್ದಾರೆ.
Vijaya Karnataka Web Ramesh Kumar


ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್‌ ಗ್ರಾಮದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,'' ಶಾಸಕರ ರಾಜೀನಾಮೆ ವಿಚಾರ ಸುಪ್ರೀಂ ಕೋರ್ಟ್‌ ಹಾಗೂ ನನ್ನ ನಡುವಿನ ಸಂಘರ್ಷವಲ್ಲ. ನಾನು ಯಾರಿಗೂ ಸವಾಲು ಹಾಕಿಲ್ಲ ,''ಎಂದು ತಿಳಿಸಿದರು.

''ಶಾಸಕರ ರಾಜೀನಾಮೆ ವಿಷಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಾದ-ಪ್ರತಿವಾದ ಮಂಗಳವಾರ ನಡೆದಿದ್ದು, ಬುಧವಾರ ಬೆಳಗ್ಗೆ 10.30ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದೆ. ಹಾಗಾಗಿ ನಾನು ಇಂದು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸುವುದು ಸಹ ತಪ್ಪಾಗುತ್ತದೆ. ಹೀಗಾಗಿ ತೀರ್ಪು ಬರುವವರೆಗೂ ನಾನು ಮಾತನಾಡುವುದಿಲ್ಲ. ಅಂತಿಮ ತೀರ್ಪು ಬಂದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ನಾನು ನಿರ್ವಹಣೆ ಮಾಡಿದ್ದೇನೆ,'' ಎಂದರು.

''ಶಾಸಕರ ರಾಜೀನಾಮೆ ಕುರಿತಂತೆ ಹಲವಾರು ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಅರ್ಜಿಗಳು ಬಂದಿವೆ. ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ, ಸಾಹಿತಿ ಡಾ.ದೇವನೂರು ಮಹದೇವ ಅವರು ಪತ್ರ ಬರೆದಿದ್ದಾರೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮಕೈಗೊಳ್ಳುತ್ತೇನೆ,'' ಎಂದು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ