ಆ್ಯಪ್ನಗರ

ನಾನು ಯಾವುದಕ್ಕೂ ಹೆದರುವವನಲ್ಲ, ಎಲ್ಲೂಓಡಿ ಹೋಗಲ್ಲ: ಡಿಕೆ ಶಿವಕುಮಾರ್‌

ಸಮನ್ಸ್‌ ಜಾರಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಶಿವಕುಮಾರ್‌ ಮತ್ತೊಮ್ಮೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮಧ್ಯಂತರ ರಕ್ಷಣೆ ಕೋರಿ ಶುಕ್ರವಾರ ಬೆಳಿಗ್ಗೆ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Vijaya Karnataka Web 30 Aug 2019, 1:42 pm
ಬೆಂಗಳೂರು: “ನಾನು ಯಾವುದಕ್ಕೂಹೆದರುವವನಲ್ಲ. ಎಲ್ಲೂಓಡಿ ಹೋಗಲ್ಲ. ‌ಎಲ್ಲವನ್ನೂ ಧೈರ್ಯವಾಗಿ ಎದುರಿಸುತ್ತೇನೆ,” -ಹೀಗಂಥ ಕಾಂಗ್ರೆಸ್‌ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್‌ ಹೇಳಿದರು.
Vijaya Karnataka Web jpg


ಶುಕ್ರವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಗುರುವಾರ ರಾತ್ರಿ ಸಮನ್ಸ್‌ ಜಾರಿ ಮಾಡಿದೆ. ಈ ಹಿಂದೆ ಇಲಾಖೆ ಜಾರಿ ಮಾಡಿದ್ದ ಸಮನ್ಸ್‌ ರದ್ದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರವಷ್ಟೇ ಹೈಕೋರ್ಟ್‌ ತಳ್ಳಿ ಹಾಕಿತ್ತು. ಬೆನ್ನಿಗೆ ಇಲಾಖೆ ಮತ್ತೊಂದು ಸಮನ್ಸ್‌ ನೀಡಿತ್ತು.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್‌ ಈ ಹೇಳಿಕೆ ನೀಡಿದರು. “ಆಪರೇಷನ್ ಕಮಲದಲ್ಲಿ ಕೋಟ್ಯಂತರರೂಪಾಯಿ ವ್ಯವಹಾರ ನಡೆದಿದೆ. ವಿಧಾನಸಭೆಯಲ್ಲಿ ಶಾಸಕ ಶ್ರೀನಿವಾಸ ಗೌಡ ಬಹಿರಂಗವಾಗಿ ಆಮಿಷದ ಬಗ್ಗೆ ಹೇಳಿದ್ದರು. ಇಡಿ ಅಧಿಕಾರಿಗಳು ಏಕೆ ಸುಮ್ಮನಿದ್ದಾರೆ?” ಎಂದು ಅವರು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.

“ಮಾಧ್ಯಮಗಳು ವಿಚಿತ್ರವಾಗಿ ಕಲ್ಪನೆ ಮಾಡಿಕೊಂಡು ನನ್ನ ಬಗ್ಗೆ ವ್ಯಾಖ್ಯಾನ ಮಾಡಿವೆ. ನಾನು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಕಾರ್ಯಕರ್ತನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ. ಗುಜರಾತ್, ಮಹಾರಾಷ್ಟ್ರ ಹಾಗೂ ನಮ್ಮ ಶಾಸಕರನ್ನುಕಾಪಾಡುವ ಜವಾಬ್ದಾರಿ ವಹಿಸಿದರು. ಪಕ್ಷದ ಸೂಚನೆ ಪ್ರಕಾರ ಕೆಲಸ ಮಾಡಿದ್ದೇನೆ,” ಎಂದು ಅವರು ಹೇಳಿದರು.

“ನನ್ನ ಮೇಲೆ ಐಟಿ ಅಧಿಕಾರಿಗಳುಕೇಂದ್ರ ಪೊಲೀಸ್ ಪಡೆತಂದು ದಾಳಿ ಮಾಡಿದ್ದರು. ನಾನು ಕಾನೂನಿಗೆ ಗೌರವ ಕೊಡುವ ಶಾಸಕ. ನಾನು ಯಾವುದಕ್ಕೂಹೆದರುವವನಲ್ಲ. ಎಲ್ಲೂಓಡಿ ಹೋಗಲ್ಲ. ‌‌ಇಡಿ ಸೇರಿದಂತೆಯಾವುದೇ ಸಂಸ್ಥೆಗಳು ತನಿಖೆ ನಡೆಸಿದರೂ ಅದನ್ನು ಎದುರಿಸಲು ನಾನುಸಿದ್ದ. ನಾವು ಮಾಡಿರುವ ಕಾನೂನಿಗೆ ನಾವೇ ಗೌರವ ಕೊಡದಿರಲುಸಾಧ್ಯವಿಲ್ಲ,” ಎಂದು ಅವರು ವಿವರಿಸಿದರು.

ಈ ಮೂಲಕ ತಮಗೆ ಬಂಧನ ಭೀತಿಯಾಗಲಿ, ಬೇರಾವುದೇ ಹೆದರಿಕೆಯಾಗಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಪ್ರತಿಪಾದಿಸಿದರು. ಇನ್ನೊಂದೆಡೆ ಸಮನ್ಸ್‌ ಜಾರಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಶಿವಕುಮಾರ್‌ ಮತ್ತೊಮ್ಮೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಜಾರಿ ನಿರ್ದೇಶನಾಲಯದಿಂದ ಇಂದು ಹಾಜರಾತಿಗೆ ಸೂಚನೆ ಇರುವುರಿಂದ ಮಧ್ಯಂತರ ರಕ್ಷಣೆ ಕೋರಿ ಶುಕ್ರವಾರ ಬೆಳಿಗ್ಗೆ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ