ಆ್ಯಪ್ನಗರ

ಯಡಿಯೂರಪ್ಪ ಮತ್ತು ನಾನು ಒಂದೇ ಆಸ್ಪತ್ರೆಯಲ್ಲಿದ್ದಾಗ ಏನೇನು ಮಾತಾಡಿದ್ರಂತ ಗೊತ್ತು! ಸದನದಲ್ಲಿ ಸಿದ್ದರಾಮಯ್ಯ ಚಟಾಕಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ನಾನು ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂದರ್ಭದಲ್ಲಿ ಏನೆಲ್ಲಾ ಮಾತನಾಡಿದ್ದೀರಾ ಎಂದು ಗೊತ್ತು! ಹೀಗಂದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ‌

Vijaya Karnataka Web 23 Sep 2020, 4:13 pm
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ನಾನು ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂದರ್ಭದಲ್ಲಿ ಏನೆಲ್ಲಾ ಮಾತನಾಡಿದ್ದೀರಾ ಎಂದು ಗೊತ್ತು! ಹೀಗಂದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ‌
Vijaya Karnataka Web Siddaramaiah


ನಿಯಮ 69 ರ ಅಡಿಯಲ್ಲಿ ಕೋವಿಡ್ ಭ್ರಷ್ಟಾಚಾರದ ಬಗ್ಗೆ ವಿಧಾನಸಭೆಯಲ್ಲಿ ಬುಧವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೋವಿಡ್‌ ಬಂದಿದೆ ಈ ಕಾರಣಕ್ಕಾಗಿ ಅವರ ಅಕ್ಕಪಕ್ಕದಲ್ಲಿ ಕೂತವರು ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು. ‌

ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಎಚ್ಚರಿಕೆ ವಹಿಸಿ ಎಂದರು. ಈ ವೇಳೆ ಶಾಸಕರೊಬ್ಬರು ನೀವು ಯಡಿಯೂರಪ್ಪ ಜೊತೆಗೆ ಚೆನ್ನಾಗಿದ್ದೀರಿ ಎಂದು ಕಾಲೆಳೆದರು.

ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲ, ವಿರೋಧ ಪಕ್ಷ ಜನರ ದಾರಿ ತಪ್ಪಿಸುತ್ತಿದೆ; ಸಚಿವ ಎಸ್‌ಟಿ ಸೋಮಶೇಖರ್

ಇದಕ್ಕೆ ನಗುತ್ತಲೇ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಿಎಂ ಬಿ ಎಸ್ ವೈ ಹಾಗೂ ನನ್ನ ನಡುವೆ ವೈಯಕ್ತಿಕ ಸಂಬಂಧ ಇದೆ, ರಾಜಕೀಯ ಸಂಬಂಧ ಬೇರೆ.

ನಾವಿಬ್ಬರು ಕೋವಿಡ್ ಚಿಕಿತ್ಸೆಗಾಗಿ ಒಂದೇ ಆಸ್ಪತ್ರೆಯಲ್ಲಿ ಇದ್ದಾಗ ಏನೇನು ಮಾತನಾಡಿದ್ದಾರೆ ಎಂದು ಗೊತ್ತಿದೆ ಎಂದಾಗ ಸದನದಲ್ಲಿ ನಗೆಯ ಅಲೆ‌ ಮೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ