ಆ್ಯಪ್ನಗರ

ನಾನು ಆರೂವರೆ ಕೋಟಿ ಜನರ ಮುಲಾಜಿನಲ್ಲಿ ಇಲ್ಲ: ಕುಮಾರಸ್ವಾಮಿ

ನಾನು ಆರೂವರೆ ಕೋಟಿ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka Web 27 May 2018, 12:05 pm
ಬೆಂಗಳೂರು: ನಾನು ಆರೂವರೆ ಕೋಟಿ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web kumaraswamy


ಸಾಲ ಮನ್ನಾ ಮಾಡದಿದ್ದರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಡಿ ಎಂದು ಒತ್ತಡ ಹೇರುವ ಅಗತ್ಯವಿಲ್ಲ. ಇನ್ನೂ ಸಚಿವ ಸಂಪುಟ ವಿಸ್ತರಣೆ ಆಗಿಲ್ಲ, ಒಂದು ವಾರ ಕಾಲಾವಕಾಶ ಕೊಡಿ. ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ರೈತ ಸಂಘಟನೆಗಳು ನನಗೆ ಒತ್ತಡ ತರುವುದು ಬೇಡ. ಚುನಾವಣೆ ಸಂದರ್ಭದಲ್ಲಿ ರೈತ ಸಂಘಟನೆಯವರು ಯಾರು ಏನೇನು ಮಾಡಿದ್ದಾರೆ ಎಂಬುದು ಗೊತ್ತು. ನಾನು ಕುರ್ಚಿಗೆ ಅಂಟಿಕೊಂಡು ಕೂರುವವನಲ್ಲ ಎಂದರು.

ಕಾಂಗ್ರೆಸ್‌ನವರು ಹಣಕಾಸು ಖಾತೆ ಕೇಳುತ್ತಿದ್ದಾರೆ. ಸಂಪುಟ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಕೇಳುವುದು ಸಹಜ. ಕೇಳಿದ್ದರಲ್ಲಿ ತಪ್ಪಿಲ್ಲ. ಪ್ರಮುಖ ಖಾತೆಗಳ ಹಂಚಿಕೆಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಇದರಲ್ಲಿ ಯಾವುದೇ ರೀತಿಯ ಫೈಟ್ ಇಲ್ಲ. ಚರ್ಚೆ ಮಾಡಿ ತೀರ್ಮಾನ ಆಗಬೇಕಿದೆ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ