ಆ್ಯಪ್ನಗರ

ತನಿಖೆಯ ಪ್ರಗತಿ ಕೇಳಿದ ಹೈಕೋರ್ಟ್‌

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರ ಹಿತ ಕಾಯಲು ಕೈಗೊಂಡಿರುವ ಕ್ರಮಗಳೇನೆಂದು ಸರಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್‌, ಈವರೆಗೆ ...

Vijaya Karnataka 18 Jun 2019, 5:00 am
ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರ ಹಿತ ಕಾಯಲು ಕೈಗೊಂಡಿರುವ ಕ್ರಮಗಳೇನೆಂದು ಸರಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್‌, ಈವರೆಗೆ ಪೊಲೀಸರು ನಡೆಸಿರುವ ತನಿಖೆಯ ಪ್ರಗತಿಯ ವಿವರ ಸಲ್ಲಿಸಲು ಸೂಚನೆ ನೀಡಿದೆ.
Vijaya Karnataka Web haamer


ಇಮ್ರಾನ್‌ ಪಾಷಾ ಮತ್ತಿತರರು ವಂಚಕ ಕಂಪನಿಗಳ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ಎ.ಎಸ್‌.ಓಕ್‌ ಮತ್ತು ನ್ಯಾ.ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.

ಆಗ ನ್ಯಾಯಪೀಠ, ಸರಕಾರಿ ವಕೀಲರನ್ನು ''ತನಿಖೆ ಎಲ್ಲಿಯವರೆಗೆ ಬಂದಿದೆ? ಯಾವ ಹಂತದಲ್ಲಿದೆ? ನೀವು ಯಾವ ರೀತಿಯ ತನಿಖೆ ಮಾಡುತ್ತಿದ್ದೀರೋ ತಿಳಿದಿಲ್ಲ. ತನಿಖಾ ಸಂಸ್ಥೆಗಳ ನಡುವೆ ಸಮನ್ವಯ ಇರಬೇಕು. ಈ ಎರಡು ಸಂಸ್ಥೆಗಳ ವಿರುದ್ಧ ಯಾವ ಕಾನೂನಿನಡಿ ಕೇಸುಗಳನ್ನು ದಾಖಲು ಮಾಡಿದ್ದೀರಾ ''ಎಂದು ಕೇಳಿತು.

ಆಗ ಸರಕಾರಿ ವಕೀಲರು, ಅಗತ್ಯ ಮಾಹಿತಿಯನ್ನು ಒದಗಿಸಲು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಕೋರಿದರು. ನ್ಯಾಯಾಲಯ ವಿಚಾರಣೆಯನ್ನು ಜು.2ಕ್ಕೆ ಮುಂದೂಡಿತು.

ಸಿಬಿಐಗೆ ನೋಟಿಸ್‌ ಜಾರಿ: ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ವಂಚನೆಗೆ ಒಳಗಾಗಿರುವ ಚಿತ್ರದುರ್ಗ ಮೂಲದ ಮೊಹಮ್ಮದ್‌ ಸಿರಾಜುದ್ದೀನ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಏಕಸದಸ್ಯಪೀಠ ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದೆ.

ಅರ್ಜಿಯನ್ನು ಆಲಿಸಿದ ನ್ಯಾ.ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯಪೀಠ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ಪರ ವಕೀಲ ಜಿ.ಆರ್‌. ಮೋಹನ್‌ ''ಮನ್ಸೂರ್‌ ಖಾನ್‌ ಪ್ರಭಾವಿ ವ್ಯಕ್ತಿಯಾಗಿದ್ದು, ಸಚಿವರು, ರಾಜಕಾರಣಿಗಳು, ಐಪಿಎಸ್‌ ಅಧಿಕಾರಿಗಳಿಗೆ ಆಪ್ತನಾಗಿದ್ದಾನೆ. ಎಸ್‌ಐಟಿಯಿಂದ ವಂಚಿತರಿಗೆ ನ್ಯಾಯ ಸಿಗುವುದಿಲ್ಲ. ಆದ್ದರಿಂದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಯಾದ ಸಿಬಿಐಗೆ ವಹಿಸಬೇಕೆಂದು '' ಕೋರಿದರು

ಇನ್ನೂ ಹಲವು ಅರ್ಜಿಗಳು

ಐಎಂಎ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ವಿಚಾರಣೆಗೆ ಬರಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ