2022ರಿಂದ ಪ್ರಾಥಮಿಕಕ್ಕೂ ಹೊಸ ಶಿಕ್ಷಣ ನೀತಿ ಜಾರಿ: ಸಚಿವ ಬಿ.ಸಿ.ನಾಗೇಶ್
ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022ರ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ಅಳವಡಿಸಲು ಸರಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಎನ್ಇಪಿ ಜಾರಿ ರಾಜ್ಯಕ್ಕೆ ಬಿಟ್ಟಿದ್ದು ಎಂದು ತಿಳಿಸಿದರು.
Vijaya Karnataka 28 Oct 2021, 10:12 pm
ಹೈಲೈಟ್ಸ್:
- ಬೆಳಲಗೆರೆ ಗ್ರಾಮದಲ್ಲಿಶತಮಾನದ ಶಾಲೆ ನೂತನ ಕಟ್ಟಡ ಉದ್ಘಾಟನೆ
- ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಸಿದ್ಧತೆ ನಡೆಯುತ್ತಿದೆ ಎಂದ ಸಚಿವ ಬಿ.ಸಿ. ನಾಗೇಶ್
- 2022ರಿಂದ ಪ್ರಾಥಮಿಕಕ್ಕೂ ಹೊಸ ಶಿಕ್ಷಣ ನೀತಿ ಜಾರಿ
ದಾವಣಗೆರೆ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022ರ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ಅಳವಡಿಸಲು ಸರಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಶತಮಾನದ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಪೂರ್ವದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಾಥಮಿಕ ಹಂತದಲ್ಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವ ಕುರಿತು ಮದನಗೋಪಾಲ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ಶಿಕ್ಷಣ ತಜ್ಞರು ಎರಡು ಅಥವಾ ಮೂರು ಸ್ವಯಂ ಸೇವಾ ಸಂಸ್ಥೆಗಳು ಇರಲಿವೆ ಎಂದರು.
ಪಠ್ಯ ಕ್ರಮ, ಶಿಕ್ಷಕರಿಗೆ ತರಬೇತಿ ಇತರೆ ವಿಷಯಗಳ ಬಗ್ಗೆ ಸಮಿತಿ ಚರ್ಚಿಸಲಿದೆ. ಕೇಂದ್ರ ಸರಕಾರ ಕೂಡ ಪ್ರಾಥಮಿಕ ಹಂತದಿಂದಲೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಒಲವು ಹೊಂದಿದೆ. ಅದರಂತೆಯೇ ರಾಜ್ಯದಲ್ಲೂ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲಾಗುವುದು ಎಂದು ತಿಳಿಸಿದರು.
ಆರ್ಎಸ್ಎಸ್ ಅಜೆಂಡಾ ಅಲ್ಲ:
ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಶಿಕ್ಷಣ ನೀತಿ (ಎನ್ಇಪಿ) ಮಾಡಲಾಗಿದ್ದು, ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದೆ. ಆರ್ಎಸ್ಎಸ್ ಅಜೆಂಡಾವನ್ನು ಹೊಸ ಶಿಕ್ಷಣ ನೀತಿಯಲ್ಲಿ ಜಾರಿ ಮಾಡುತ್ತಿದ್ದಾರೆಂಬ ಕೆಲವರು ಆರೋಪ ಸುಳ್ಳು ಎಂದರು.
ಕಸ್ತೂರಿ ರಂಗನ್ ಒಬ್ಬ ವಿಜ್ಞಾನಿಯಾಗಿದ್ದು, ಏಳು ಪಿಎಂಗೆ ಸಲಹೆಗಾರರು ಆಗಿದ್ದರು. ಅವರೇನೂ ಆರ್ಎಸ್ಎಸ್ ನವರಾ?, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೂ ಸಲಹೆಗಾರರಾಗಿದ್ದರು. ಅನಗತ್ಯವಾಗಿ ವಿಕಪ್ಷದವರು ಆರೋಪ ಮಾಡುವುದು ಸರಿಯಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ನನಗೆ ಒಂದು ಪತ್ರವು ಬಂದಿಲ್ಲ, ವಿಷಯವೂ ನನ್ನ ಗಮನಕ್ಕೆ ಬಂದಿಲ್ಲ. ಆಕಸ್ಮಾತ್ ವಿರೋಧ ಇದ್ದರೆ ತಿಳಿಸಿ, ಸುಮ್ಮನೆ ಇಲ್ಲಸಲ್ಲದ ಆರೋಪ ಬೇಡ. ಆರೋಪಿಸುವ ಮುನ್ನ ಹೊಸ ಶಿಕ್ಷಣ ನೀತಿ ಬಗ್ಗೆ ಓದಿಕೊಂಡು ಬನ್ನಿ ಚರ್ಚೆ ಮಾಡೋಣ ಎಂದು ವಿರೋಧಿಗಳಿಗೆ ತೀರುಗೇಟು ನೀಡಿದರು.
ಎನ್ಇಪಿ ಜಾರಿ ರಾಜ್ಯಕ್ಕೆ ಬಿಟ್ಟಿದ್ದು:
ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಶಿಕ್ಷಣ ನೀತಿ ಮಾಡಲಾಗಿದೆ. ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳ ಕೌಶಲ ಹೆಚ್ಚು ಮಾಡುತ್ತದೆ. ಒಂದು ವರ್ಗವನ್ನು ಶಿಕ್ಷಣದಿಂದ ದೂರ ಇಡಲಾಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಹಿಂದಿ ಹೇರಿಕೆ ಇಲ್ಲ. ಮಾತೃ ಭಾಷೆಗೆ ಆದ್ಯತೆ ನೀಡಲಾಗಿದ್ದು, ಅದು ಹೊಸ ಶಿಕ್ಷಣ ನೀತಿಯಲ್ಲಿದೆ. ಹೊಸ ಶಿಕ್ಷಣ ನೀತಿ ಜಾರಿಗೆ 2040 ರ ವರೆಗೆ ಕಾಲಾವಕಾಶವಿದೆ. ಈ ನೀತಿ ಜಾರಿಗೆ ಕೇಂದ್ರ ಸರಕಾರ ಒತ್ತಡವನ್ನು ಹಾಕುತ್ತಿಲ್ಲ. ಅದನ್ನು ಆಯಾ ರಾಜ್ಯಕ್ಕೆ ಬಿಡಲಾಗಿದೆ ಎಂದು ತಿಳಿಸಿದರು.
ಕೇರಳ ಕಾರಣಕ್ಕೆ ಮಕ್ಕಳಿಗೆ ಸೋಂಕು
ಕೊಡಗಿನಲ್ಲಿ 30 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದಕ್ಕೆ ಕೆಲ ಕಾರಣಗಳಿದೆ. ಅಲ್ಲಿ ಕೇರಳ ಹತ್ತಿರವಿದ್ದು, 450 ವಿದ್ಯಾರ್ಥಿಗಳನ್ನು ಟೆಸ್ಟ್ ಮಾಡಿದಾಗ ಸೋಂಕು ಬಂದಿರುವುದು ಗೊತ್ತಾಗಿದೆ. ಅದೊಂದು ವಸತಿ ಸಹಿತ ಶಾಲೆಯಾಗಿದ್ದು, ಸೂಕ್ತ ಪರೀಕ್ಷೆ ಹಾಗೂ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. ದೇಶದಲ್ಲಿ ಕೋವಿಡ್ ಲಸಿಕೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಇದೇ ಕಾರಣಕ್ಕೆ ಕೋವಿಡ್ ಸಂಕಷ್ಟ ಬರುವುದು ಕಡಿಮೆ. ಮುಂದೆ ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ನಾಗೇಶ್ ಹೇಳಿದರು.
ಶಿಕ್ಷಕರ ಪಾಠ ಮಾಡಲು ನೇಮಕ
ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡುವುದಕ್ಕೆ. ಸಂಸಾರ ನೋಡಿಕೊಳ್ಳೋಕೆ ಅಲ್ಲ. ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಎರಡು ದಿನದಿಂದ ಮತ್ತೆ ಶುರುವಾಗಿದೆ. ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಾದ ಹೊಣೆ ಸರಕಾರದ ಮೇಲಿದೆ ಎಂದು ಸಚಿವರು ತಿಳಿಸಿದರು.
ಪ್ರಾಥಮಿಕ ಹಂತದಲ್ಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವ ಕುರಿತು ಮದನಗೋಪಾಲ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ಶಿಕ್ಷಣ ತಜ್ಞರು ಎರಡು ಅಥವಾ ಮೂರು ಸ್ವಯಂ ಸೇವಾ ಸಂಸ್ಥೆಗಳು ಇರಲಿವೆ ಎಂದರು.
ಪಠ್ಯ ಕ್ರಮ, ಶಿಕ್ಷಕರಿಗೆ ತರಬೇತಿ ಇತರೆ ವಿಷಯಗಳ ಬಗ್ಗೆ ಸಮಿತಿ ಚರ್ಚಿಸಲಿದೆ. ಕೇಂದ್ರ ಸರಕಾರ ಕೂಡ ಪ್ರಾಥಮಿಕ ಹಂತದಿಂದಲೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಒಲವು ಹೊಂದಿದೆ. ಅದರಂತೆಯೇ ರಾಜ್ಯದಲ್ಲೂ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲಾಗುವುದು ಎಂದು ತಿಳಿಸಿದರು.
ಆರ್ಎಸ್ಎಸ್ ಅಜೆಂಡಾ ಅಲ್ಲ:
ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಶಿಕ್ಷಣ ನೀತಿ (ಎನ್ಇಪಿ) ಮಾಡಲಾಗಿದ್ದು, ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದೆ. ಆರ್ಎಸ್ಎಸ್ ಅಜೆಂಡಾವನ್ನು ಹೊಸ ಶಿಕ್ಷಣ ನೀತಿಯಲ್ಲಿ ಜಾರಿ ಮಾಡುತ್ತಿದ್ದಾರೆಂಬ ಕೆಲವರು ಆರೋಪ ಸುಳ್ಳು ಎಂದರು.
ಕಸ್ತೂರಿ ರಂಗನ್ ಒಬ್ಬ ವಿಜ್ಞಾನಿಯಾಗಿದ್ದು, ಏಳು ಪಿಎಂಗೆ ಸಲಹೆಗಾರರು ಆಗಿದ್ದರು. ಅವರೇನೂ ಆರ್ಎಸ್ಎಸ್ ನವರಾ?, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೂ ಸಲಹೆಗಾರರಾಗಿದ್ದರು. ಅನಗತ್ಯವಾಗಿ ವಿಕಪ್ಷದವರು ಆರೋಪ ಮಾಡುವುದು ಸರಿಯಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ನನಗೆ ಒಂದು ಪತ್ರವು ಬಂದಿಲ್ಲ, ವಿಷಯವೂ ನನ್ನ ಗಮನಕ್ಕೆ ಬಂದಿಲ್ಲ. ಆಕಸ್ಮಾತ್ ವಿರೋಧ ಇದ್ದರೆ ತಿಳಿಸಿ, ಸುಮ್ಮನೆ ಇಲ್ಲಸಲ್ಲದ ಆರೋಪ ಬೇಡ. ಆರೋಪಿಸುವ ಮುನ್ನ ಹೊಸ ಶಿಕ್ಷಣ ನೀತಿ ಬಗ್ಗೆ ಓದಿಕೊಂಡು ಬನ್ನಿ ಚರ್ಚೆ ಮಾಡೋಣ ಎಂದು ವಿರೋಧಿಗಳಿಗೆ ತೀರುಗೇಟು ನೀಡಿದರು.
ಎನ್ಇಪಿ ಜಾರಿ ರಾಜ್ಯಕ್ಕೆ ಬಿಟ್ಟಿದ್ದು:
ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಶಿಕ್ಷಣ ನೀತಿ ಮಾಡಲಾಗಿದೆ. ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳ ಕೌಶಲ ಹೆಚ್ಚು ಮಾಡುತ್ತದೆ. ಒಂದು ವರ್ಗವನ್ನು ಶಿಕ್ಷಣದಿಂದ ದೂರ ಇಡಲಾಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಹಿಂದಿ ಹೇರಿಕೆ ಇಲ್ಲ. ಮಾತೃ ಭಾಷೆಗೆ ಆದ್ಯತೆ ನೀಡಲಾಗಿದ್ದು, ಅದು ಹೊಸ ಶಿಕ್ಷಣ ನೀತಿಯಲ್ಲಿದೆ. ಹೊಸ ಶಿಕ್ಷಣ ನೀತಿ ಜಾರಿಗೆ 2040 ರ ವರೆಗೆ ಕಾಲಾವಕಾಶವಿದೆ. ಈ ನೀತಿ ಜಾರಿಗೆ ಕೇಂದ್ರ ಸರಕಾರ ಒತ್ತಡವನ್ನು ಹಾಕುತ್ತಿಲ್ಲ. ಅದನ್ನು ಆಯಾ ರಾಜ್ಯಕ್ಕೆ ಬಿಡಲಾಗಿದೆ ಎಂದು ತಿಳಿಸಿದರು.
ಕೇರಳ ಕಾರಣಕ್ಕೆ ಮಕ್ಕಳಿಗೆ ಸೋಂಕು
ಕೊಡಗಿನಲ್ಲಿ 30 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದಕ್ಕೆ ಕೆಲ ಕಾರಣಗಳಿದೆ. ಅಲ್ಲಿ ಕೇರಳ ಹತ್ತಿರವಿದ್ದು, 450 ವಿದ್ಯಾರ್ಥಿಗಳನ್ನು ಟೆಸ್ಟ್ ಮಾಡಿದಾಗ ಸೋಂಕು ಬಂದಿರುವುದು ಗೊತ್ತಾಗಿದೆ. ಅದೊಂದು ವಸತಿ ಸಹಿತ ಶಾಲೆಯಾಗಿದ್ದು, ಸೂಕ್ತ ಪರೀಕ್ಷೆ ಹಾಗೂ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. ದೇಶದಲ್ಲಿ ಕೋವಿಡ್ ಲಸಿಕೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಇದೇ ಕಾರಣಕ್ಕೆ ಕೋವಿಡ್ ಸಂಕಷ್ಟ ಬರುವುದು ಕಡಿಮೆ. ಮುಂದೆ ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ನಾಗೇಶ್ ಹೇಳಿದರು.
ಶಿಕ್ಷಕರ ಪಾಠ ಮಾಡಲು ನೇಮಕ
ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡುವುದಕ್ಕೆ. ಸಂಸಾರ ನೋಡಿಕೊಳ್ಳೋಕೆ ಅಲ್ಲ. ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಎರಡು ದಿನದಿಂದ ಮತ್ತೆ ಶುರುವಾಗಿದೆ. ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಾದ ಹೊಣೆ ಸರಕಾರದ ಮೇಲಿದೆ ಎಂದು ಸಚಿವರು ತಿಳಿಸಿದರು.