ಆ್ಯಪ್ನಗರ

ಚಿಕ್ಕಬಳ್ಳಾಪುರ: 'ಮಹಾ' ವಲಸಿಗರಿಂದ ಜಿಲ್ಲೆಗೆ ಕೊರೊನಾಘಾತ

ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳುತ್ತಿರುವ ವಲಸೆ ಕಾರ್ಮಿಕರಿಂದ ಕೊರೊನಾ ವಿಸ್ತರಿಸುವ ಬಗ್ಗೆ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿ ಮುಖ್ಯ ಕಾರ‍್ಯದರ್ಶಿಯೊಂದಿಗೆ ಆತಂಕ ತೋಡಿಕೊಂಡಿದ್ದು, ಶುಕ್ರವಾರ ನಿಜವಾಗಿದೆ.

Vijaya Karnataka Web 22 May 2020, 9:18 pm
ಚಿಕ್ಕಬಳ್ಳಾಪುರ: ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿದ ವಲಸಿಗರ ಪೈಕಿ 47 ಮಂದಿ ಕೊರೊನಾ ದೃಢವಾಗಿದ್ದು, ಸೋಂಕಿತರ ಸಂಖ್ಯೆ 26ರಿಂದ ಏಕಾಏಕಿ ಒಂದೇ ದಿನ 73ಕ್ಕೆ ಏರಿಕೆಯಾಗಿದೆ.
Vijaya Karnataka Web ಕೊರೊನಾ ವೈರಸ್‌
ಕೊರೊನಾ ವೈರಸ್‌


ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಿಂದ ಸುಮಾರು 247 ಮಂದಿ ವಲಸೆ ಕಾರ್ಮಿಕರು ಖಾಸಗಿ ಬಸ್‌ಗಳ ಮೂಲಕ ಜಿಲ್ಲೆಗೆ ಬಂದಿದ್ದು, ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿತ್ತು. ಈ ಪೈಕಿ ಮೊದಲ ಹಂತದ ತಪಾಸಣಾ ವರದಿಯಲ್ಲಿ ಒಟ್ಟು 47 ಮಂದಿಗೆ ಸೋಂಕು ದೃಢ ಪಟ್ಟಿದ್ದು, 63 ಮಂದಿಯ ವರದಿ ನೆಗೆಟಿವ್‌ ಬಂದಿದೆ. ಉಳಿದ 137 ಮಂದಿ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಕಾರಿ ಆರ್‌. ಲತಾ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳುತ್ತಿರುವ ವಲಸೆ ಕಾರ್ಮಿಕರಿಂದ ಕೊರೊನಾ ವಿಸ್ತರಿಸುವ ಬಗ್ಗೆ ಸಚಿವ ಡಾ ಕೆ ಸುಧಾಕರ್‌ ಟ್ವೀಟ್‌ ಮಾಡಿ ಮುಖ್ಯ ಕಾರ‍್ಯದರ್ಶಿಯೊಂದಿಗೆ ಆತಂಕ ತೋಡಿಕೊಂಡಿದ್ದು, ಶುಕ್ರವಾರ ನಿಜವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ