ಆ್ಯಪ್ನಗರ

ಕರ್ನಾಟಕ ವಿವಿ ಪ್ರೊಫೆಸರ್‌ ಸೇರಿದಂತೆ ಸರಕಾರಿ ಅಧಿಕಾರಗಳ ಮನೆ ಮೇಲೆ ಐಟಿ ದಾಳಿ

ಧಾರವಾಡ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಿನಲ್ಲಿರುವ ಆರೋಪಿತ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಒಟ್ಟು ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka Web 12 Jun 2019, 9:54 am
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದ ಕರ್ನಾಟಕ ವಿವಿ ಪ್ರೊಫೆಸರ್ ಸೇರಿದಂತೆ ಮೂವರು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
Vijaya Karnataka Web IT Raid


ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಭೌತಶಾಸ್ತ್ರ ಪ್ರೊಫೆಸರ್, ಈ ಹಿಂದೆ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸಿದ್ದ ಕಲ್ಲಪ್ಪ ಎಂ ಹೊಸಮನಿ, ಉತ್ತರ ಕನ್ನಡ ಜಿಲ್ಲೆ ಜೊಯ್ಡಾ ಉಪ ವಿಭಾಗ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉದಯ್ ಡಿ.ಛಬ್ಬಿ ಮತ್ತು ಮಂಗಳೂರು ಕಚೇರಿ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಹಾಯಕ ಎಂಜಿನಿಯರ್ ಮಹದೇವಪ್ಪ ಅವರ ಮನೆ, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಧಾರವಾಡ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಿನಲ್ಲಿರುವ ಆರೋಪಿತ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಒಟ್ಟು ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಇ ಮಹದೇವಪ್ಪ ಮನೆಗೆ ಎಸಿಬಿ ದಾಳಿ. ಕದ್ರಿ ಕಂಬಳದಲ್ಲಿರುವ ಮನೆ . ಒಟ್ಟು 4 ಕಡೆಗಳಲ್ಲಿರುವ ಅವರ ಮನೆಗಳಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ