ಆ್ಯಪ್ನಗರ

ರಾಜ್ಯದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಜ್ಯದೆಲ್ಲೆಡೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

Vijaya Karnataka Web 15 Aug 2019, 11:27 am
ಬೆಂಗಳೂರು: ರಾಜ್ಯದೆಲ್ಲೆಡೆ ಸಂಭ್ರಮದಿಂದ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದ್ದು, ನಗರದ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.
Vijaya Karnataka Web independence day celebration in karnataka state
ರಾಜ್ಯದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ರಾಜ್ಯ ಮಾಲಿನ್ಯ‌ ನಿಯಂತ್ರಣ ‌ಮಂಡಳಿಯ ಬೆಂಗಳೂರು ‌ಚರ್ಚ್ ಸ್ಟ್ರೀಟ್ ಕಚೇರಿಯಲ್ಲಿ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ ಧ್ವಜಾರೋಹಣ ನೆರವೇರಿಸಿದರು.


ಬೆಂಗಳೂರು ಜಲಮಂಡಳಿಯ ಕಾವೇರಿ ಭವನದಲ್ಲಿ ಮಂಡಳಿ‌‌ ಅಧ್ಯಕ್ಷ ತುಷಾರ್ ಗಿರಿನಾಥ್ ಧ್ವಜಾರೋಹಣ ‌ಮಾಡಿದರು.


ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸಂತ್ರಸ್ತರು

ಬಾಗಲಕೋಟೆ ಜಿಲ್ಲೆಯ ಪ್ರವಾಹಪೀಡಿತ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಸಂತ್ರಸ್ತರು ಸ್ವಾತಂತ್ರ್ಯ ದಿvಚರಣೆಯಲ್ಲಿ ಪಾಲ್ಗೊಂಡರು. ಗ್ರಾಮದ ಮನೆಗಳು ಜಲಾವೃತವಾಗಿರುವುದರಿಂದ ಗ್ರಾಮಸ್ಥರು ಕಾಳಜಿ ಕೇಂದ್ರದಲ್ಲಿದ್ದಾರೆ. ಕಾಳಜಿ ಕೇಂದ್ರದಲ್ಲೇ ದಿನಾಚರಣೆ ನಡೆಯಿತು.


ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜರುಗಿದ 73ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಸರಕಾರದ ಸಂದೇಶ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ