ಆ್ಯಪ್ನಗರ

ಸಚಿವ ಸ್ಥಾನಕ್ಕೆ ರಾಜೀನಾಮೆ: ಸರಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆದ ಪಕ್ಷೇತರ ಶಾಸಕ

ಮೈತ್ರಿ ಸರಕಾರಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ 14 ಶಾಸಕರು ರಾಜೀನಾಮೆ ನೀಡಿದ ಬಳಿಕ ಪಕ್ಷೇತರ ಅಭ್ಯರ್ಥಿಯೊಬ್ಬರು ಸಚಿವ ಸ್ಥಾನಕ್ಕೆ ಗುಡ್ ಬೈ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದಾರೆ.

Vijaya Karnataka Web 8 Jul 2019, 3:20 pm
ಬೆಂಗಳೂರು: ಸಚಿವ ಸ್ಥಾನಕ್ಕೆ ಮುಳಬಾಗಿಲು ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.
Vijaya Karnataka Web nagesh2


ರಾಜಭವನಕ್ಕೆ ತರಳಿದ ನಾಗೇಶ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮೊನ್ನೆಯಷ್ಟೆ (ಜೂನ್ 11) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ನಾಗೇಶ್ ಅವರು ಸಣ್ಣ ನೀರಾವರಿ ಖಾತೆ ಗಿಟ್ಟಿಸಿಕೊಳ್ಳಲು ಸಫಲರಾಗಿದ್ದರು.

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಬೆಂಬಲಿಸುವ ಪತ್ರ ಬಿಡುಗಡೆ ಮಾಡಿದ್ದಾರೆ.

ಮುಂಬಯಿಗೆ ನಾಗೇಶ್?

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಾಗೇಶ್ ಅವರು ಮುಂಬಯಿಗೆ ತೆರಳಿ ಅತೃತ್ತರ ಗುಂಪು ಸೇರಲಿದ್ದಾರೆಂದು ಹೇಳಲಾಗುತ್ತಿದೆ.

ಬಂಡಾಯ ಶಮನಕ್ಕೆ ಮುಲಾಮು ಹಚ್ಚುವ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಉಪಹಾರ ಕೂಡ ಆಯೋಜಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕೈ ನಾಯಕರು ಆಗಮಿಸುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ನಾಗೇಶ್ ಅವರು ರಾಜೀನಾಮೆ ನೀಡಿರುವುದು ದೋಸ್ತಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ