ಆ್ಯಪ್ನಗರ

ಜಿಲ್ಲೆಗಳ ಇಂದಿರಾ ಕ್ಯಾಂಟೀನ್‌ಗೆ 81.67 ಕೋಟಿ ರೂ. ಬಿಡುಗಡೆ

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು 8167 ಕೋಟಿ ರೂ ಬಿಡುಗಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ...

Vijaya Karnataka 12 Jan 2018, 5:00 am

ಬೆಂಗಳೂರು : ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು 81.67 ಕೋಟಿ ರೂ. ಬಿಡುಗಡೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದೀಗ ಅಗತ್ಯ ಅನುದಾನ ಬಿಡುಗಡೆ ಮಾಡಿದಂತಾಗಿದೆ.

ರಾಜ್ಯದ 173 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 247 ಕ್ಯಾಂಟೀನ್‌ ಆರಂಭಿಸಲು ಪೌರಾಡಳಿತ ನಿರ್ದೇಶನಾಲಯಕ್ಕೆ ಈ ಮೊತ್ತವನ್ನು ಒದಗಿಸಲಾಗಿದೆ. ಹಲವು ಜಿಲ್ಲಾ ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳೂ ಕಾರ್ಯಾರಂಭ ಮಾಡಿವೆ. ಸರಕಾರದ ಸಾಧನಾ ಸಮಾವೇಶಕ್ಕೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕ್ಯಾಂಟೀನ್‌ಗಳನ್ನು ಉದ್ಘಾಟಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ