ಆ್ಯಪ್ನಗರ

ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಕ್ಕೆ ಇನ್ಫೋಸಿಸ್‌ 10 ಲಕ್ಷ ರೂ. ನೆರವು

ಮಂಡ್ಯದ ಯೋಧ ಗುರು ಅವರ ನಿವಾಸಕ್ಕೆ ಖುದ್ದು ಭೇಟಿ ನೀಡುತ್ತೇನೆ. ಮುಂದಿನ ವಾರದಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಸುಧಾ ಮೂರ್ತಿ ಸ್ಪಷ್ಟಪಡಿಸಿದರು.

Vijaya Karnataka Web 17 Feb 2019, 1:50 pm
ಬೆಂಗಳೂರು: ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಬಲಿಯಾದ 40 ಸಿಆರ್‌ಪಿಎಫ್‌ ಯೋಧರ ಕುಟುಂಬಗಳಿಗೆ ದೇಶದೆಲ್ಲೆಡೆಯಿಂದಲೂ ನೆರವಿನ ಮಹಾಪೂರ ಹರಿದುಬರುತ್ತಿದೆ.
Vijaya Karnataka Web ಸುಧಾ ಮೂರ್ತಿ
ಸುಧಾ ಮೂರ್ತಿ


ಪ್ರತಿಯೊಬ್ಬ ನಾಗರಿಕ ಕೂಡ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾನೆ. ಇದಕ್ಕಾಗಿ ನೆರವು ನೀಡಲು ಮುಂದಾಗಿದ್ದಾನೆ.

ಹಲವಾರು ಸಂಘಸಂಸ್ಥೆಗಳು, ಗಣ್ಯರು ಕೂಡ ನೆರವಿನ ಹಸ್ತ ಚಾಚಿದ್ದಾರೆ.

ಜಾಗತಿಕ ಸಾಫ್ಟ್‌ವೇರ್‌ ಸಂಸ್ಥೆಯಾದ ಇನ್ಫೋಸಿಸ್‌ ಪ್ರತಿಷ್ಠಾನ ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ.

ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಪ್ರತಿ ಯೋಧನ ಕುಟುಂಬಕ್ಕೆ 10 ಲಕ್ಷ ರೂ. ನೀಡಲಾಗುವುದು ಎಂದು ಇನ್ಫೋಸಿಸ್‌ ಪ್ರತಿಷ್ಠಾನ ಘೋಷಣೆ ಮಾಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ ಈ ಕುರಿತು ಮಾಹಿತಿ ನೀಡಿದ್ದಾರೆ.

ದೇಶಕ್ಕಾಗಿ ಪ್ರಾಣತ್ಯಾಗ ನೀಡಿದ್ದಾರೆ. ಕೂಡಲೇ ಅವರಿಗೆ ಆರ್ಥಿಕ ನೆರವು ನೀಡಬೇಕು ಎಂದುಕೊಂಡಡೆ. ಹಣಕ್ಕಿಂತ ಯೋಧರ ಪ್ರಾಣ ಮುಖ್ಯ ಎಂದು ಅವರು ಹೇಳಿದರು.

ಮಂಡ್ಯದ ಯೋಧ ಗುರು ಅವರ ನಿವಾಸಕ್ಕೆ ಖುದ್ದು ಭೇಟಿ ನೀಡುತ್ತೇನೆ. ಮುಂದಿನ ವಾರದಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಆರ್ಥಿಕ ನೆರವು ನೀಡಲಾಗುವುದು ಎಂದು ಸುಧಾ ಮೂರ್ತಿ ಸ್ಪಷ್ಟಪಡಿಸಿದರು.

ಕಳೆದ ಗುರುವಾರ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರು ತೆರಳುತ್ತಿದ್ದ ವಾಹನಗಳಿಗೆ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ 40 ಯೋಧರು ಮೃತಪಟ್ಟರು.

ಮಂಡ್ಯದ ಮದ್ದೂರು ತಾಲೂಕಿನ ಗುಡಿಗೇರಿ ಗ್ರಾಮದ ಗುರು ಮೃತಪಟ್ಟಿದ್ದರು. ಗುರು ಕುಟುಂಬಕ್ಕೆ ರಾಜ್ಯ ಸರಕಾರ ಈಗಾಗಲೇ 25 ಲಕ್ಷ ರೂ. ಪರಿಹಾರ ನೀಡಿದೆ.

ಹಲವಾರು ಸಂಘಸಂಸ್ಥೆಗಳು ಗುರು ಕುಟುಂಬಕ್ಕೆ ನೆರವು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ