ಬೆಂಗಳೂರು: ಸಚಿವ ಮುರುಗೇಶ್ ಆರ್. ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಇಬ್ಬರು ನಾಯಕರ ನಡುವೆ ಆರಂಭಗೊಂಡ ಕಿತ್ತಾಟ ಬಹಿರಂಗವಾದ ‘ಅಶ್ಲೀಲ’ ವಾಕ್ಸಮರಕ್ಕೆ ಬಂದು ತಲುಪಿದೆ. ಸದಾ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್ ವಿರುದ್ಧ ತಾಳ್ಮೆ ಕಳೆದುಕೊಂಡ ನಿರಾಣಿ ಕಠಿಣ ಪದಗಳನ್ನು ಬಳಸಿ ತಿರುಗೇಟು ನೀಡಿದ್ದಾರೆ. ಇಬ್ಬರು ನಾಯಕರ ನಡುವಿನ ಬಹಿರಂಗ ಕಿತ್ತಾಟ ಬಿಜೆಪಿ ವರಿಷ್ಠರಿಗೆ ಹಾಗೂ ರಾಜ್ಯ ನಾಯಕರಿಗೆ ತೀವ್ರ ಮುಜುಗರ ಉಂಟು ಮಾಡಿದ್ದು, ದೆಹಲಿಯಿಂದ ಬುಲಾವ್ ಕೂಡಾ ಬಂದಿದೆ.
ಯತ್ನಾಳ್ v/s ನಿರಾಣಿ ಕಿತ್ತಾಟಕ್ಕೆ ಕಾರಣವೇನು?
ಪಂಚಮಸಾಲಿ 2ಎ ಮೀಸಲಾತಿ ಬೇಡಿಕೆ ವಿಚಾರವಾಗಿ ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಆರಂಭದಲ್ಲೇ ಭಿನ್ನಾಭಿಪ್ರಾಯ ತಲೆದೋರಿತ್ತು. ಇಬ್ಬರು ಆರಂಭಿಕ ಹೋರಾಟದಲ್ಲಿ ಜೊತೆಗಿದ್ದರೂ ಸಚಿವ ಸ್ಥಾನ ಸಿಕ್ಕ ಬಳಿಕ ನಿರಾಣಿ ತಮ್ಮ ವರಸೆಯನ್ನು ಬದಲಾಯಿದ್ದಾರೆ ಎಂಬ ಆರೋಪ ಯತ್ನಾಳ್ ಅವರದ್ದು. ಈ ನಿಟ್ಟಿನಲ್ಲಿ ನಿರಾಣಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿಯನ್ನು ನಡೆಸುತ್ತಾ ಬಂದ ಯತ್ನಾಳ್ ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡುವ ಮೂಲಕ ಕೋಪ ತೀರಿಸಿಕೊಂಡಿದ್ದಾರೆ.
ಯತ್ನಾಳ್ ಟೀಕೆಗೆ ಪ್ರತ್ಯುತ್ತರ ನೀಡುತ್ತಾ ಬಂದಿದ್ದ ನಿರಾಣಿ ಇದೀಗ ತಾಳ್ಮೆ ಕಳೆದುಕೊಂಡು ಕಠಿಣ ಪದಗಳ ಪ್ರಯೋಗ ಮೂಲಕ ತಿರುಗೇಟು ನೀಡಿದ್ದರು. ಅಷ್ಟೇ ಅಲ್ಲದೆ ಯತ್ನಾಳ್ ಜೊತೆಗಿದ್ದ ಕಾರು ಚಾಲಕನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬಹಿರಂಗ ಹೇಳಿಕೆ ನೀಡಿದ್ದರು. ಪರಿಣಾಮ ಇಬ್ಬರು ನಾಯಕರ ಬಹಿರಂಗ ಕಿತ್ತಾಟ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಈ ನಡುವೆ ಮುರುಗೇಶ್ ನಿರಾಣಿ ಬೆಂಬಲಕ್ಕೆ ಅವರ ಸಹೋದರ ಸಂಗಮೇಶ್ ನಿರಾಣಿ ಬಂದಿದ್ದು, ನಿನ್ನ ಭಾಷೆಯಲ್ಲೇ ಉತ್ತರ ಕೊಡುತ್ತೇನೆ, ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ ಎಂದು ಟ್ವೀಟ್ ಮೂಲಕ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಕಾರು ಚಾಲಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನಿರಾಣಿ
ಯತ್ನಾಳ್ ಪಿಂಪ್ ಆರೋಪದ ಬಗ್ಗೆ ಕೆಂಡಕಾರಿದ ನಿರಾಣಿ ಯತ್ನಾಳ್ ಕಾರು ಚಾಲಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಸಾವು ಹೇಗಾಯಿತೆಂದು ಪ್ರಶ್ನೆ ಮಾಡಿದ್ದರು. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರೊಬ್ಬರ ಈ ಅನುಮಾನ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಸಿಎಂಗೆ ಪತ್ರ ಬರೆದ ಯತ್ನಾಳ್
ಮುರುಗೇಶ್ ನಿರಾಣಿ ಅವರು ಯತ್ನಾಳ್ ಕಾರು ಚಾಲಕನ ಸಾವಿನ ಕುರಿತಾಗಿ ವ್ಯಕ್ತಪಡಿಸಿದ್ದ ಅನುಮಾನದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು 24 ಗಂಟೆಯಲ್ಲಿ ಸಿಬಿಐ ತನಿಖೆಗೆ ನೀಡಿ ಇಲ್ಲವೇ ಸುಳ್ಳು ಆರೋಪ ಮಾಡಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಆಗ್ರಹಿಸಿದ್ದಾರೆ.
ವರಿಷ್ಠರಿಂದ ಬುಲಾವ್
ಮೀಸಲಾತಿ ವಿಚಾರವಾಗಿ ಆರಂಭವಾದ ಇಬ್ಬರು ನಾಯಕರ ನಡುವಿನ ತಿಕ್ಕಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವರಿಷ್ಠರಿಂದ ಬುಲಾವ್ ಬಂದಿದೆ. ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕೊಲೆ ರಹಸ್ಯ ಏನೆಂದು ಬಿಜೆಪಿ ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಆಗ್ರಹ
ಯತ್ನಾಳ್ ಕಾರು ಚಾಲಕನ ಸಾವಿನ ಕುರಿತಾಗಿ ಏನು ನಡೆದಿದೆ ಎಂಬುವುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ ಯತ್ನಾಳರ ಚಾಲಕನ ಕೊಲೆ ವಿಚಾರ ಬಿಜೆಪಿ ನಾಯಕರಿಗೆ ತಿಳಿದಿದ್ದರೂ ಇಷ್ಟು ದಿನ ಮುಚ್ಚಿಟ್ಟಿದ್ದೇಕೆ? ಬಸವರಾಜ ಬೊಮ್ಮಾಯಿ ಅವರೇ, ಏನದು ಕೊಲೆ ರಹಸ್ಯ? ತನಿಖೆ ಮಾಡಿಲ್ಲವೇಕೆ? ಯತ್ನಾಳರನ್ನು ಕಂಡರೆ ತಮಗೆ ಏಕಿಷ್ಟು ಭಯ? ಯತ್ನಾಳ್ ಹೇಳುತ್ತಿರುವ ಸಿಡಿ ರಹಸ್ಯ, ನಿರಾಣಿ ಹೇಳುತ್ತಿರುವ ಕೊಲೆ ರಹಸ್ಯ ಏನೆಂದು ಬಿಜೆಪಿ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದೆ.
ಬಿಜೆಪಿ ಪಕ್ಷಕ್ಕೆ ಮುಜುಗರ
ಯತ್ನಾಳ್ ವರ್ಸಸ್ ನಿರಾಣಿ ನಡುವಿನ ಬಹಿರಂಗ ಕಿತ್ತಾಟ ಬಿಜೆಪಿಗೆ ಮುಜುಗರ ತಂದೊಡ್ಡಿದೆ. ಚುನಾವಣಾ ಸಂದರ್ಭದಲ್ಲೇ ಬಹಿರಂಗವಾಗಿ ನಡೆಯುತ್ತಿರುವ ವಾಕ್ಸಮರ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತಿದೆ. ಈ ನಿಟ್ಟಿನಲ್ಲಿ ವರಿಷ್ಠರು ಸೂಕ್ತ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ಈ ಹಿಂದೆಯೂ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಆಗಿರಲಿಲ್ಲ. ಇದೀಗ ಮತ್ತೊಂದು ಬಾರಿ ವರಿಷ್ಠರಿಂದ ಬುಲಾವ್ ಬಂದಿದ್ದು ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದು ಸದ್ಯದ ಕುತೂಹಲ.
ಯತ್ನಾಳ್ v/s ನಿರಾಣಿ ಕಿತ್ತಾಟಕ್ಕೆ ಕಾರಣವೇನು?
ಪಂಚಮಸಾಲಿ 2ಎ ಮೀಸಲಾತಿ ಬೇಡಿಕೆ ವಿಚಾರವಾಗಿ ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಆರಂಭದಲ್ಲೇ ಭಿನ್ನಾಭಿಪ್ರಾಯ ತಲೆದೋರಿತ್ತು. ಇಬ್ಬರು ಆರಂಭಿಕ ಹೋರಾಟದಲ್ಲಿ ಜೊತೆಗಿದ್ದರೂ ಸಚಿವ ಸ್ಥಾನ ಸಿಕ್ಕ ಬಳಿಕ ನಿರಾಣಿ ತಮ್ಮ ವರಸೆಯನ್ನು ಬದಲಾಯಿದ್ದಾರೆ ಎಂಬ ಆರೋಪ ಯತ್ನಾಳ್ ಅವರದ್ದು. ಈ ನಿಟ್ಟಿನಲ್ಲಿ ನಿರಾಣಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿಯನ್ನು ನಡೆಸುತ್ತಾ ಬಂದ ಯತ್ನಾಳ್ ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡುವ ಮೂಲಕ ಕೋಪ ತೀರಿಸಿಕೊಂಡಿದ್ದಾರೆ.
ಯತ್ನಾಳ್ ಟೀಕೆಗೆ ಪ್ರತ್ಯುತ್ತರ ನೀಡುತ್ತಾ ಬಂದಿದ್ದ ನಿರಾಣಿ ಇದೀಗ ತಾಳ್ಮೆ ಕಳೆದುಕೊಂಡು ಕಠಿಣ ಪದಗಳ ಪ್ರಯೋಗ ಮೂಲಕ ತಿರುಗೇಟು ನೀಡಿದ್ದರು. ಅಷ್ಟೇ ಅಲ್ಲದೆ ಯತ್ನಾಳ್ ಜೊತೆಗಿದ್ದ ಕಾರು ಚಾಲಕನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬಹಿರಂಗ ಹೇಳಿಕೆ ನೀಡಿದ್ದರು. ಪರಿಣಾಮ ಇಬ್ಬರು ನಾಯಕರ ಬಹಿರಂಗ ಕಿತ್ತಾಟ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಈ ನಡುವೆ ಮುರುಗೇಶ್ ನಿರಾಣಿ ಬೆಂಬಲಕ್ಕೆ ಅವರ ಸಹೋದರ ಸಂಗಮೇಶ್ ನಿರಾಣಿ ಬಂದಿದ್ದು, ನಿನ್ನ ಭಾಷೆಯಲ್ಲೇ ಉತ್ತರ ಕೊಡುತ್ತೇನೆ, ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ ಎಂದು ಟ್ವೀಟ್ ಮೂಲಕ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಕಾರು ಚಾಲಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನಿರಾಣಿ
ಯತ್ನಾಳ್ ಪಿಂಪ್ ಆರೋಪದ ಬಗ್ಗೆ ಕೆಂಡಕಾರಿದ ನಿರಾಣಿ ಯತ್ನಾಳ್ ಕಾರು ಚಾಲಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಸಾವು ಹೇಗಾಯಿತೆಂದು ಪ್ರಶ್ನೆ ಮಾಡಿದ್ದರು. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರೊಬ್ಬರ ಈ ಅನುಮಾನ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಸಿಎಂಗೆ ಪತ್ರ ಬರೆದ ಯತ್ನಾಳ್
ಮುರುಗೇಶ್ ನಿರಾಣಿ ಅವರು ಯತ್ನಾಳ್ ಕಾರು ಚಾಲಕನ ಸಾವಿನ ಕುರಿತಾಗಿ ವ್ಯಕ್ತಪಡಿಸಿದ್ದ ಅನುಮಾನದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು 24 ಗಂಟೆಯಲ್ಲಿ ಸಿಬಿಐ ತನಿಖೆಗೆ ನೀಡಿ ಇಲ್ಲವೇ ಸುಳ್ಳು ಆರೋಪ ಮಾಡಿರುವ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಆಗ್ರಹಿಸಿದ್ದಾರೆ.
ವರಿಷ್ಠರಿಂದ ಬುಲಾವ್
ಮೀಸಲಾತಿ ವಿಚಾರವಾಗಿ ಆರಂಭವಾದ ಇಬ್ಬರು ನಾಯಕರ ನಡುವಿನ ತಿಕ್ಕಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವರಿಷ್ಠರಿಂದ ಬುಲಾವ್ ಬಂದಿದೆ. ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕೊಲೆ ರಹಸ್ಯ ಏನೆಂದು ಬಿಜೆಪಿ ಬಹಿರಂಗಪಡಿಸಬೇಕೆಂದು ಕಾಂಗ್ರೆಸ್ ಆಗ್ರಹ
ಯತ್ನಾಳ್ ಕಾರು ಚಾಲಕನ ಸಾವಿನ ಕುರಿತಾಗಿ ಏನು ನಡೆದಿದೆ ಎಂಬುವುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ ಯತ್ನಾಳರ ಚಾಲಕನ ಕೊಲೆ ವಿಚಾರ ಬಿಜೆಪಿ ನಾಯಕರಿಗೆ ತಿಳಿದಿದ್ದರೂ ಇಷ್ಟು ದಿನ ಮುಚ್ಚಿಟ್ಟಿದ್ದೇಕೆ? ಬಸವರಾಜ ಬೊಮ್ಮಾಯಿ ಅವರೇ, ಏನದು ಕೊಲೆ ರಹಸ್ಯ? ತನಿಖೆ ಮಾಡಿಲ್ಲವೇಕೆ? ಯತ್ನಾಳರನ್ನು ಕಂಡರೆ ತಮಗೆ ಏಕಿಷ್ಟು ಭಯ? ಯತ್ನಾಳ್ ಹೇಳುತ್ತಿರುವ ಸಿಡಿ ರಹಸ್ಯ, ನಿರಾಣಿ ಹೇಳುತ್ತಿರುವ ಕೊಲೆ ರಹಸ್ಯ ಏನೆಂದು ಬಿಜೆಪಿ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದೆ.
ಬಿಜೆಪಿ ಪಕ್ಷಕ್ಕೆ ಮುಜುಗರ
ಯತ್ನಾಳ್ ವರ್ಸಸ್ ನಿರಾಣಿ ನಡುವಿನ ಬಹಿರಂಗ ಕಿತ್ತಾಟ ಬಿಜೆಪಿಗೆ ಮುಜುಗರ ತಂದೊಡ್ಡಿದೆ. ಚುನಾವಣಾ ಸಂದರ್ಭದಲ್ಲೇ ಬಹಿರಂಗವಾಗಿ ನಡೆಯುತ್ತಿರುವ ವಾಕ್ಸಮರ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತಿದೆ. ಈ ನಿಟ್ಟಿನಲ್ಲಿ ವರಿಷ್ಠರು ಸೂಕ್ತ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ಈ ಹಿಂದೆಯೂ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಆಗಿರಲಿಲ್ಲ. ಇದೀಗ ಮತ್ತೊಂದು ಬಾರಿ ವರಿಷ್ಠರಿಂದ ಬುಲಾವ್ ಬಂದಿದ್ದು ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದು ಸದ್ಯದ ಕುತೂಹಲ.