ಆ್ಯಪ್ನಗರ

ಐಪಿಎಸ್‌ ಅಧಿಕಾರಿ ಮಧುಕರ್‌ ಶೆಟ್ಟಿಗೆ ಶಸ್ತ್ರಚಿಕಿತ್ಸೆ

ಎಚ್‌1ಎನ್‌1 ಸೋಂಕಿನಿಂದ ಬಳಲುತ್ತಿರುವ ಐಪಿಎಸ್‌ ಅಧಿಕಾರಿ, ಡಿಐಜಿ ಕೆ...

Vijaya Karnataka 28 Dec 2018, 5:00 am
ಬೆಂಗಳೂರು: ಎಚ್‌1ಎನ್‌1 ಸೋಂಕಿನಿಂದ ಬಳಲುತ್ತಿರುವ ಐಪಿಎಸ್‌ ಅಧಿಕಾರಿ, ಡಿಐಜಿ ಕೆ.ಮಧುಕರ್‌ ಶೆಟ್ಟಿ ಅವರಿಗೆ ಗುರುವಾರ ಹೃದಯ ಮತ್ತು ಶ್ವಾಸಕೋಶ ಸಂಬಂಧಿಸಿದಂತೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದರು.
Vijaya Karnataka Web BNG-2612-2-2-MADUKARA SHETTY


ಹೈದರಾಬಾದ್‌ನ ಕಾಂಟಿನೆಂಟಲ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಮಧುಕರ್‌ ಶೆಟ್ಟಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಹೃದಯ ಮತ್ತು ಶ್ವಾಸಕೋಶಕ್ಕೆ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ತಂಡ ಮತ್ತು ನಾರಾಯಣ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಧುಕರ್‌ ಶೆಟ್ಟಿ ಅವರ ಚಿಕಿತ್ಸೆಯ ಜವಾಬ್ದಾರಿ ವಹಿಸಿಕೊಂಡಿರುವ ಎಡಿಜಿಪಿ ಪ್ರತಾಪ್‌ರೆಡ್ಡಿ ಮತ್ತು ಕಲಬುರಗಿ ಜಿಲ್ಲೆ ಎಸ್‌ಪಿ ಎನ್‌.ಶಶಿಕುಮಾರ್‌ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದಾರೆ.

ಈ ನಡುವೆ, ಹಲವಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಮಧುಕರ್‌ಶೆಟ್ಟಿ ಫೋಟೋ ಅಪ್‌ಲೋಡ್‌ ಮಾಡಿ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

ವೈದ್ಯರೊಂದಿಗೆ ಮಾತನಾಡಿದ ಸಿಎಂ: ಈ ಮಧ್ಯೆ, ಮಧುಕರ್‌ಶೆಟ್ಟಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರ ಜತೆ ಮಾತನಾಡಿರುವುದಾಗಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ನ್ಯೂಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿರುವ ಮಧುಕರ್‌ಶೆಟ್ಟಿ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ