ಆ್ಯಪ್ನಗರ

ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಸರಕಾರವು ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಪ್ರಕಟಿಸಿದೆ.

Vijaya Karnataka Web 17 May 2018, 4:58 pm
ಬೆಂಗಳೂರು: ಕರ್ನಾಟಕ ಸರಕಾರವು ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಪ್ರಕಟಿಸಿದೆ.
Vijaya Karnataka Web IPS Transferd


ರೈಲ್ವೆಯ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮರ್‌ ಕುಮಾರ್‌ ಪಾಂಡೆ ಅವರನ್ನು ಪೊಲೀಸ್‌ ಹೆಚ್ಚುವರಿ ಮಹಾ ನಿರ್ದೇಶಕ (ಗುಪ್ತದಳ) ರನ್ನಾಗಿ ವರ್ಗಾಯಿಸಲಾಗಿದೆ.

ಡಿಐಜಿಪಿ(ಕೆಎಸ್‌ಆರ್‌ಪಿ) ಸಂದೀಪ್‌ ಪಾಟೀಲ್‌ ಅವರನ್ನು ಗುಪ್ತದಳ ಡಿಐಜಿಪಿಯಾಗಿ ನಿಯೋಜಿಸಲಾಗಿದೆ.

ಬೀದರ್‌ ಜಿಲ್ಲಾ ಪೊಲೀಸ್‌ ಅಧೀಕ್ಷಕರಾಗಿದ್ದ ಡಿ. ದೇವರಾಜ್‌ ಅವರನ್ನು ಬೆಂಗಳೂರು ನಗರ ಕೇಂದ್ರ ವಿಭಾಗಕ್ಕೆ ಪೊಲೀಸ್‌ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹದಳದಲ್ಲಿದ್ದ ಪೊಲೀಸ್‌ ಅಧೀಕ್ಷಕ ಎಸ್‌. ಗಿರೀಶ್‌ ಅವರನ್ನು ಬೆಂಗಳೂರು ನಗರ ಈಶಾನ್ಯ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ