ಆ್ಯಪ್ನಗರ

ಹೊಸ ವರ್ಷ: ರಾತ್ರಿ 2ರವೆರೆಗೆ ಮದ್ಯ ಮಾರಾಟ, ಬಡವರಿಗೆ ಸಬ್ಸಿಡಿ ದರ ನೀಡಲು ಚಿಂತನೆ- ಅಬಕಾರಿ ಸಚಿವ

ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 2 ಗಂಟೆಯವರಗೆ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದರು. ಇದಕ್ಕೆ ಗೃಹ ಇಲಾಖೆ ಕೂಡ ಸಮ್ಮತಿ ನೀಡಿದೆಯಂತೆ.

Vijaya Karnataka Web 31 Dec 2019, 2:37 pm
ಬೆಂಗಳೂರು: ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 2 ಗಂಟೆಯವರಗೆ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದರು.
Vijaya Karnataka Web beer


ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾನ್ಯವಾಗಿ ವೈನ್ ಶಾಪ್ ಗಳು ರಾತ್ರಿ 11 ಗಂಟೆವರಗೆ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಗಳು ಮಧ್ಯರಾತ್ರಿ 1ಗಂಟೆಯವರೆಗೆ ತೆರೆದಿರುತ್ತವೆ. ಹೊಸ ವರ್ಷದ ದಿನದಂದು ಮದ್ಯ ಮಾರಾಟದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಅಂದರೆ, ಮಧ್ಯರಾತ್ರಿ 2 ಗಂಟೆವರಗೆ ಅವಕಾಶ ಕೊಡಲು ಗೃಹ ಇಲಾಖೆ ಕೂಡ ಸಮ್ಮತಿಸಿದೆ ಎಂದು ಹೇಳಿದರು.

ಬಡ ಜನರು ಹೆಚ್ಚು ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿ ದರದಲ್ಲಿ ಕೊಡಬೇಕಂದು ಸರ್ಕಾರದ ಚಿಂತನೆ ಇದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಯೋಜನೆ ರೂಪಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ 'ಬೀರು' ಮಾರಾಟ ಕುಸಿತ : ತಲೆ ಬಿಸಿ ಮಾಡಿಕೊಡ ಅಬಕಾರಿ ಇಲಾಖೆ!

ಬಿಯರ್ ಮಾರಾಟವನ್ನು ಕಡಿಮೆ ಮಾಡಿ ಹಾಟ್ ಲಿಕ್ಕರ್ ಅನ್ನು ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮದ್ಯ ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿ ಬಿಯರ್ ಮಾರಾಟ ನಿಯಂತ್ರಿಸದಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಬಿಯರ್‌ ಮಾರಾಟ ಕುಸಿದರೂ ಆದಾಯ ಏರಿಕೆ: ಸಾವಿರ ಕೋಟಿ ಅಬಕಾರಿ ಸುಂಕ ಹೆಚ್ಚಳ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ