ಆ್ಯಪ್ನಗರ

ಕಾಳಿ ಹುಲಿ ಯೋಜನೆಯಲ್ಲಿ ಅವ್ಯವಹಾರ : ಸಿಐಡಿ ತನಿಖೆಗೆ ಆಗ್ರಹ

ಕಾಳಿ ಹುಲಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಅದನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಕಾಳಿ ಬ್ರಿಗೇಡ್‌ ಸಂಸ್ಥೆಯ ಮುಖ್ಯ ಸಂಚಾಲಕ ರವಿ ರೇಡಕರ ಆಗ್ರಹಿಸಿದರು.

Vijaya Karnataka Web 22 Jun 2018, 9:30 am
ಬೆಂಗಳೂರು: ಕಾಳಿ ಹುಲಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಅದನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಕಾಳಿ ಬ್ರಿಗೇಡ್‌ ಸಂಸ್ಥೆಯ ಮುಖ್ಯ ಸಂಚಾಲಕ ರವಿ ರೇಡಕರ ಆಗ್ರಹಿಸಿದರು.
Vijaya Karnataka Web tiger


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಈ ಅಕ್ರಮದ ಹಣ ಅರಣ್ಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಪಾಲಾಗುತ್ತಿದೆ. ಅಕ್ರಮ ಕಾಮಗಾರಿಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು,''ಎಂದು ಒತ್ತಾಯಿಸಿದರು.

''ಈ ಯೋಜನೆ ವನ್ಯಜೀವಿಗಳಿಗೆ ಮಾರಕವಾಗಿದ್ದು, ಅದನ್ನು ಜಾರಿಗೊಳಿಸುವ ಮೂಲಕ ಪರಿಸರ ಮತ್ತು ವನ್ಯಜೀವಿಗಳಿಗೆ ಹಾನಿ ಮಾಡಲಾಗುತ್ತಿದೆ. ಅಲ್ಲದೆ ವಿವಿಧ ಯೋಜನೆ ಹೆಸರಿನಲ್ಲಿ ಸರಕಾರದ ನೂರಾರು ಕೋಟಿ ಹಣವನ್ನು ಅರಣ್ಯ ಇಲಾಖೆ ಅನಗತ್ಯವಾಗಿ ವೆಚ್ಚ ಮಾಡುತ್ತಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ಹನೋಲಿಯಲ್ಲಿ ಅನಧಿಕೃತವಾಗಿ ವೀಕ್ಷ ಣಾ ಗೋಪುರ ನಿರ್ಮಿಸಲಾಗುತ್ತಿದೆ. ಮರಗಳನ್ನು ಕತ್ತರಿಸಿ ರಸ್ತೆ ಸಹ ನಿರ್ಮಿಸಲಾಗುತ್ತಿದೆ,'' ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ