ಆ್ಯಪ್ನಗರ

ವಿದ್ಯುತ್‌ ಖರೀದಿಯಲ್ಲಿ ಅವ್ಯವಹಾರ, 15,000 ಕೋಟಿ ರೂ. ನಷ್ಟ - ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಒಂದೆಡೆ ವಿದ್ಯುತ್‌ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದರೆ, ಮತ್ತೊಂದೆಡೆ ರಾಜ್ಯ ಸರಕಾರ ವಿದ್ಯುತ್‌ ದರ ಹೆಚ್ಚಳದ ಮೂಲಕ ಗ್ರಾಹಕರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

Vijaya Karnataka 21 Nov 2020, 8:50 pm
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಕಡಿತಗೊಳಿಸಿ ನೆರೆ ರಾಜ್ಯಗಳಿಂದ ವಿದ್ಯುತ್‌ ಖರೀದಿಸುತ್ತಿರುವುದರಿಂದ ಬೊಕ್ಕಸಕ್ಕೆ 15 ಸಾವಿರ ಕೋಟಿ ರೂ.ನಷ್ಟ ಸಂಭವಿಸಿದ್ದು ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
Vijaya Karnataka Web Eshwar Khandre


ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ರಾಜ್ಯ ಸರಕಾರದ ತಪ್ಪಿನಿಂದ ಬೊಕ್ಕಸಕ್ಕೆ ಅಪಾರ ನಷ್ಟವಾಗಿದೆ. ಬೇರೆ ರಾಜ್ಯದಿಂದ ವಿದ್ಯುತ್‌ ಖರೀದಿಯ ಉದ್ದೇಶ ಏನು? ಆಗುತ್ತಿರುವ ನಷ್ಟಕ್ಕೆ ಇಂಧನ ಖಾತೆವಹಿಸಿಕೊಂಡಿರುವ ಮುಖ್ಯಮಂತ್ರಿಗಳೇ ಇದರ ಹೊಣೆ ಹೊರಬೇಕು," ಎಂದು ಒತ್ತಾಯಿಸಿದರು.

"ಒಂದೆಡೆ ವಿದ್ಯುತ್‌ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದರೆ ಮತ್ತೊಂದೆಡೆ ರಾಜ್ಯ ಸರಕಾರ ವಿದ್ಯುತ್‌ ದರ ಹೆಚ್ಚಳದ ಮೂಲಕ ಗ್ರಾಹಕರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಕೂಡಲೇ ವಿದ್ಯುತ್‌ ದರ ಹೆಚ್ಚಳವನ್ನು ರಾಜ್ಯ ಸರಕಾರ ಹಿಂಪಡೆಯಬೇಕು. ಇದೊಂದು ದಿವಾಳಿ ಸರಕಾರ, ರಾಜ್ಯವನ್ನು ಮಾರಾಟ ಮಾಡಲು ಬಿಜೆಪಿ ಸರಕಾರ ಹೊರಟಿದೆ," ಎಂದು ವಾಗ್ದಾಳಿ ನಡೆಸಿದರು.

ವಿದ್ಯುತ್‌ ದರ, ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪ್ರತಿಭಟನೆ!
"15 ಸಾವಿರ ಕೋಟಿ ರೂ.ನಷ್ಟಕ್ಕೆ ಕಾರಣರಾದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಸರಕಾರದ ಗಮನಕ್ಕೆ ಇದು ಬಂದಿಲ್ಲವೇ? ಮುಖ್ಯಮಂತ್ರಿ, ಮುಖ್ಯಕಾರ್ಯದರ್ಶಿ ಏನು ಮಾಡುತ್ತಿದ್ದಾರೆ, ಇದಕ್ಕೆ ಸಿಎಂ ಉತ್ತರ ಕೊಡಬೇಕು ಜೊತೆಗೆ ಸಂಪೂರ್ಣ ತನಿಖೆ ಮಾಡಬೇಕು," ಎಂದು ಈಶ್ವರ ಖಂಡ್ರೆ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ