ಆ್ಯಪ್ನಗರ

DK Suresh-ದೇವೇಗೌಡರ ಕುಟುಂಬಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜು: ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್‌ ಕಣಕ್ಕೆ?

ಎಚ್.ಡಿ.ದೇವೇಗೌಡರ ಕುಟುಂಬದ ಭದ್ರಕೋಟೆ ರಾಮನಗರ ಭೇದಿಸಲು ಇದೀಗ ಕಾಂಗ್ರೆಸ್ ಸಜ್ಜಾಗಿ ನಿಂತಿದೆ. ರಾಮನಗರ ಕ್ಷೇತ್ರದಿಂದ ಈ ಬಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಮುಂದಿನ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಈಗಾಗಲೇ ಘೋಷಿಸಿದ್ದು ಇಲ್ಲಿ ಟಕ್ಕರ್ ಕೊಡುವ ಸಲುವಾಗಿ ಕಾಂಗ್ರೆಸ್ ಹೈಕಮಾಂಡ್ ಬೆಂಗಳೂರು ಗ್ರಾಮಾಂತರ ಸಂಸದ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲ ಮುಂದಾಗಿದೆ. ಇದು ಈಗ ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಬಲಾಬಲ ಪರೀಕ್ಷೆಗೆ ವೇದಿಕೆಯಾಗಿದೆ.

Edited byಗಣೇಶ್ ಪ್ರಸಾದ್ ಕುಂಬ್ಳೆ | Vijaya Karnataka Web 14 Mar 2023, 12:03 am
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಭದ್ರಕೋಟೆ 'ರಾಮನಗರ' ಭೇದಿಸುವ ಸವಾಲಿಗೆ ಇದೀಗ ಕಾಂಗ್ರೆಸ್‌ ಅಣಿಯಾಗಿದೆ. ಪಕ್ಕದ ಕ್ಷೇತ್ರ ಕನಕಪುರದ ಡಿ.ಕೆ.ಶಿವಕುಮಾರ್‌ಗೆ ಈ ಸವಾಲು ಹೆಗಲೇರಿದ್ದು, ಡಿ.ಕೆ.ಶಿವಕುಮಾರ್ ಅವರ ಸಹೋದರ ಹಾಗೂ ಸಂಸದ ಡಿ.ಕೆ. ಸುರೇಶ್‌ ಅವರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.
Vijaya Karnataka Web ​ಡಿಕೆ ಸುರೇಶ್‌
ಡಿಕೆ ಸುರೇಶ್‌(ಸಂಗ್ರಹ ಚಿತ್ರ)


ಈ ನಿಟ್ಟಿನಲ್ಲಿ ರಾಜ್ಯದ ಏಕೈಕ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಸ್ಪರ್ಧೆಗೆ ಸಿದ್ಧವಾಗಿರಲು ಹೈಕಮಾಂಡ್‌ ಸೂಚಿಸಿದೆ. ಈ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ನಡುವಿನ ಬಲಾಬಲ ಪರೀಕ್ಷೆಗೆ ರಾಮನಗರ ವಿಧಾನಸಭಾ ಕ್ಷೇತ್ರ ಸಾಕ್ಷಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಎಚ್‌.ಡಿ. ದೇವೇಗೌಡ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರವೆಂದೇ ಹೆಸರಾದ ರಾಮನಗರದಲ್ಲಿ ಈ ಬಾರಿ ಗೌಡರ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್‌ ಮಧ್ಯೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದೆ. ಪರೋಕ್ಷವಾಗಿ ಇದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಹೋರಾಟಕ್ಕೆ ವೇದಿಕೆಯಾಗಲಿದೆ.

Dk Suresh: ಕರ್ನಾಟಕದಲ್ಲಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ನರೇಂದ್ರ ಮೋದಿ ಏನು ಮಾಡುತ್ತಾರೆ? ಡಿಕೆ ಸುರೇಶ್ ಪ್ರಶ್ನೆ
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಪಕ್ಕದ ಚನ್ನಪಟ್ಟಣ ಕ್ಷೇತ್ರಕ್ಕೆ ಸ್ಥಳಾಂತರಗೊಂಡು, ರಾಮಧಿನಗರ ಕ್ಷೇತ್ರವನ್ನು ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದರು. ಅವರು ಈಗ ಪುತ್ರ ನಿಖಿಲ್‌ ಕುಮಾರಸ್ವಾಮಿ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿದ್ದು, ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೆಸರು ಘೋಷಣೆಯೂ ಆಗಿದೆ. ಇದೀಗ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್‌ ಅಖಾಡಕ್ಕಿಳಿಧಿಯುವುದರಿಂದ ಅಖಾಡ ರಂಗೇರಲಿದೆ. ಒಕ್ಕಲಿಗ ಸಮುಧಿದಾಯದ ಮತದಾರರ ಪ್ರಾಬಲ್ಯದ ರಾಮನಗರಧಿದಲ್ಲಿ ಮುಸ್ಲಿಂ ಸಮುದಾಯ ನಿರ್ಣಾಯಕರಾಗಿಧಿದ್ದಾರೆ. ಮುಸ್ಲಿಂ ಮತ ಗಳಿಕೆ ಜತೆಗೆ, ಒಕ್ಕಲಿಗ ಮತ ವಿಭಜನೆ ಮಾಡಿ ಲಾಭ ಪಡೆಯುವ ಲೆಕ್ಕಾಚಾರದಲ್ಲಿ ಡಿ.ಕೆ.ಸುರೇಶ್‌ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್‌ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಪಕ್ಷದ ವಿಶ್ವಾಸನೀಯ ಮೂಲಗಳು ತಿಳಿಸಿವೆ.

3 ಬಾರಿ ಎಂಪಿಯಾಗಿರುವ ಡಿಕೆ ಸುರೇಶ್
ರಾಜಕೀಯ ವಲಯದಲ್ಲಿ ಡಿಕೆಸು ಎಂದೇ ಜನಜನಿತರಾಗಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು 2013ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದ್ದರಿಂದ ಅಲ್ಲಿ ಉಪಚುನಾವಣೆ ನಡೆದಿತ್ತು. ಆ ಬಳಿಕ ಅವರು 2014 ಮತ್ತು 2019ರ ಚುನಾವಣೆಯಲ್ಲೂ ಗೆಲುವು ಸಾಧಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರಸ್ ನಿಂದ ಆಯ್ಕೆಯಾಗಿರುವ ಏಕೈಕ ಸಂಸದರವರು ಎಂಬುದು ಗಮನಾರ್ಹ ಸಂಗತಿಯಾಗಿದೆ.

DK Suresh: ಡಿಕೆ ಬ್ರದರ್ಸ್‌ ಭದ್ರಕೋಟೆಯಲ್ಲಿ ಬಿಜೆಪಿ ಯಾತ್ರೆ, 40% ಕಮಿಷನ್, ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತನಾಡಲಿ ಎಂದು ಡಿ.ಕೆ ಸುರೇಶ್‌ ತಿರುಗೇಟು
ಈ ಬಾರಿ ಅವರು ರಾಜ್ಯ ರಾಜಕಾರಣ ಪ್ರವೇಶಿಸಿದರೆ ರಾಮನಗರ ಅಖಾಡ ರಂಗೇರುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ. ರಾಮನಗರ ಕ್ಷೇತ್ರದಲ್ಲಿ ಮೊದಲಿನಿಂದಲೂ ಭಾರೀ ಪೈಪೋಟಿಯಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ. ಈ ನೇರಾನೇರಾ ಸ್ಪರ್ಧೆ ಜೊತೆಗೆ ರಾಮಬೆಟ್ಟದ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟು ಮತ ಕೇಳಲು ಮುಂದಾಗಿರುವ ಬಿಜೆಪಿಯ ತಂತ್ರಗಾರಿಕೆ ಎಷ್ಟರ ಮಟ್ಟಿಗೆ ಫಲಕೊಡುವುದು ಎಂಬುದು ಕುತೂಹಲದ ಸಂಗತಿಯಾಗಿದೆ.
ಲೇಖಕರ ಬಗ್ಗೆ
ಗಣೇಶ್ ಪ್ರಸಾದ್ ಕುಂಬ್ಳೆ
ವಿಜಯ ಕರ್ನಾಟಕದಲ್ಲಿ ಡಿಜಿಟಲ್ ಪತ್ರಕರ್ತ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ. ಓದುವಿಕೆ, ಬರೆಯುವಿಕೆ, ಯಕ್ಷಗಾನದಲ್ಲಿ ಆಸಕ್ತಿ. ಸಮಯ ಸಿಕ್ಕಾಗ ಚೆಸ್, ಕ್ರಿಕೆಟ್, ಶಟಲ್ ಆಡುವುದು, ಪ್ರವಾಸ, ಚಾರಣ ಮಾಡುವುದು ನೆಚ್ಚಿನ ಹವ್ಯಾಸಗಳು. ಶಿವರಾಮ ಕಾರಂತ ಮತ್ತು ಪೂರ್ಣಚಂದ್ರ ತೇಜಸ್ವಿಯವರ ಬರಹಳೆಂದರೆ ಅಚ್ಚಮೆಚ್ಚು. ರಾಜಕೀಯ, ಕ್ರೀಡೆ, ಮಾನವೀಯ ಸಂವೇದಿ ಲೇಖನಗಳು, ವ್ಯಕ್ತಿಚಿತ್ರ, ನುಡಿಚಿತ್ರ, ಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ಆಸಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ