ಆ್ಯಪ್ನಗರ

ಸದ್ಯಕ್ಕೆ ಡಿಕೆಶಿ ರಾಜಕೀಯ ಭವಿಷ್ಯ ಅತಂತ್ರ

ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಸದ್ಯಕ್ಕೆ ಪಕ್ಷದಲ್ಲಿ ಪ್ರಮುಖ ಸ್ಥಾನಮಾನ ಸಿಗುವುದು ಅನುಮಾನವಾಗಿದೆ.

Vijaya Karnataka 5 Sep 2019, 5:00 am
ಬೆಂಗಳೂರು: ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಸದ್ಯಕ್ಕೆ ಪಕ್ಷದಲ್ಲಿ ಪ್ರಮುಖ ಸ್ಥಾನಮಾನ ಸಿಗುವುದು ಅನುಮಾನವಾಗಿದೆ.
Vijaya Karnataka Web D K S


ಸತತ 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿಕೆಶಿ ಸಚಿವರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಮುಖ್ಯವಾಗಿ ರಾಜ್ಯಾದ್ಯಂತ ತಮ್ಮದೇ ಅಭಿಮಾನಿ ಬಳಗ ಹೊಂದಿದ್ದಾರೆ. ಭವಿಷ್ಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಳ್ಳುವುದಕ್ಕೂ ಸಿದ್ಧತೆ ನಡೆಸಿದ್ದರು. ಆದರೆ, ಇಡಿ ಬಲೆಯಲ್ಲಿ ಸಿಲುಕಿರುವುದರಿಂದ ಡಿಕೆಶಿ ಅವರಿಗೆ ನಿಚ್ಚಳ ಹಿನ್ನಡೆಯಾದಂತಾಗಿದೆ.

ಈ ಬಾರಿ ಪ್ರತಿಪಕ್ಷದ ನಾಯಕರಾಗಲು ಡಿಕೆಶಿ ಯೋಚಿಸಿದ್ದರು. ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಬೇಕು ಎನ್ನುವುದೂ ಅವರ ಆಲೋಚನೆಯಾಗಿತ್ತು. ಆದರೆ, ತನಿಖೆ ಮುಗಿಯುವ ವರೆಗೂ ಅವರಿಗೆ ಇಂಥ ಸ್ಥಾನಮಾನಗಳು ದೊರಕುವುದು ಕಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ.

ತನಿಖೆ ಜಾರಿಯಲ್ಲಿರುವಾಗ ಡಿಕೆಶಿ ಅವರಿಗೆ ಮಹತ್ವದ ಜವಾಬ್ದಾರಿ ವಹಿಸಿದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಆತಂಕ ವರಿಷ್ಠರನ್ನು ಕಾಡಬಹುದು. ಈ ಹಿನ್ನೆಲೆಯಲ್ಲಿ ಡಿಕೆಶಿ ವಿಚಾರದಲ್ಲಿ ಹೈಕಮಾಂಡ್‌ ಕಾಯ್ದು ನೋಡುವ ತಂತ್ರ ಅನುಸರಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ