ಆ್ಯಪ್ನಗರ

ದೇಶದಲ್ಲಿ ಅಘೋಷಿತ ಎಮರ್ಜೆನ್ಸಿ ಇದ್ದಂತೆ ಭಾಸವಾಗ್ತಿದೆ: ಸಿದ್ದರಾಮಯ್ಯ

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದ್ದಂತೆ ಭಾಸವಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

Vijaya Karnataka Web 15 Aug 2019, 2:59 pm
ಬೆಂಗಳೂರು: ದೇಶದಲ್ಲಿ ಅಫೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
Vijaya Karnataka Web siddaramiah

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದ್ದಂತೆ ಭಾಸವಾಗುತ್ತಿದೆ. ಈ ಸಂದಿಗ್ಧ ಪರಿಸ್ಥಿತಿಯಿಂದ ದೇಶವನ್ನು ಹೊರತರು ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಫೋನ್‌ ಕದ್ದಾಲಿಕೆ ಕುರಿತು ತನಿಖೆ ಆಗ್ರಹಿಸಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬಂತೆ ಭಾಸವಾಗುತ್ತಿದೆ ಎಂದಿದ್ದಾರೆ.


ಈ ಸುದ್ದಿಯನ್ನೂ ಓದಿರಿ: ಫೋನ್ ಕದ್ದಾಲಿಕೆ ಗಂಭೀರ ಅಪರಾಧ: ಮಾಜಿ ಸಿಎಂ ಸಿದ್ದರಾಮಯ್ಯ
ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣಾರ್ಪಣೆ ಮಾಡಿದ್ದಾರೆ, ವರ್ಷಾನುಗಟ್ಟಲೆ ಸೆರೆವಾಸ ಅನುಭವಿಸಿದ್ದಾರೆ. ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಇವರ‌್ಯಾರು ಕೂಡ ಸ್ವಾರ್ಥಕ್ಕಾಗಿ ಹೋರಾಡಿದವರಲ್ಲ ಎಂದವರು ಹೇಳಿದರು.


ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಎಲ್ಲ ಹುತಾತ್ಮರನ್ನು ಸ್ಮರಿಸುತ್ತಾ ದೇಶದ ಐಕ್ಯತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ ಜೊತೆಗೆ ಜಾತ್ಯಾತೀತ ಹಾಗೂ ಪರಧರ್ಮ ಸಹಿಷ್ಣು ಮನೋಭಾವನೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ ಮಾಡಬೇಕಾಗಿದೆ. ಆಗ ಮಾತ್ರ ನಮಗೆ ದೊರೆತ ಸ್ವತಂತ್ರ ಸಾರ್ಥಕವಾಗುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ