ಆ್ಯಪ್ನಗರ

ತಪ್ಪಿನ ಅರಿವಾಗಿ ಕಾಂಗ್ರೆಸ್ ಪಾದಯಾತ್ರೆ ಕೈಬಿಟ್ಟಿದ್ದು ಸೂಕ್ತ ನಿರ್ಧಾರ - ಅಶ್ವತ್ಥ ನಾರಾಯಣ್‌

ಕಾಂಗ್ರೆಸ್ ಪಕ್ಷದ ನಾಯಕರು ಈಗ ಮೇಕೆದಾಟು ಪಾದಯಾತ್ರೆ ಕೈ ಬಿಟ್ಟಿದ್ದಾರೆ. ತಮ್ಮ ತಪ್ಪಿನ ಅರಿವಾಗಿ ಪಾದಯಾತ್ರೆ ಕೈಬಿಟ್ಟಿದ್ದು ಸೂಕ್ತ ನಿರ್ಧಾರ ಎಂದು ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ್‌ ಅಭಿಪ್ರಾಯಪಟ್ಟಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 13 Jan 2022, 5:23 pm

ಹೈಲೈಟ್ಸ್‌:

  • ಕಾಂಗ್ರೆಸ್ ಪಕ್ಷದ ನಾಯಕರು ಈಗ ಮೇಕೆದಾಟು ಪಾದಯಾತ್ರೆ ಕೈ ಬಿಟ್ಟಿದ್ದಾರೆ
  • ತಮ್ಮ ತಪ್ಪಿನ ಅರಿವಾಗಿ ಪಾದಯಾತ್ರೆ ಕೈಬಿಟ್ಟಿದ್ದು ಸೂಕ್ತ ನಿರ್ಧಾರ
  • ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ್‌ ಹೇಳಿಕೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web CN Ashwath Narayan
ಬೆಂಗಳೂರು: ತಮ್ಮ ತಪ್ಪು ಅರಿವಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಕೈಬಿಟ್ಟಿದ್ದು ಸಂತೋಷ ಎಂದು ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅಶ್ವತ್ಥ ನಾರಾಯಣ್‌, ಕಾಂಗ್ರೆಸ್ ಪಕ್ಷದ ನಾಯಕರು ಮೇಕೆದಾಟು ಪಾದಯಾತ್ರೆ ಕೈ ಬಿಟ್ಟಿದ್ದಾರೆ. ತಪ್ಪು ಅರಿವಾಗಿ ಪಾದಯಾತ್ರೆ ಕೈಬಿಟ್ಟಿದ್ದು ಸೂಕ್ತ ನಿರ್ಧಾರ ಎಂದು ಅಭಿಪ್ರಾಯಪಟ್ಟರು.

ಮೇಕೆದಾಟು ನಮಗೆಲ್ಲ ಬೇಕಾಗಿರುವ ಯೋಜನೆ. ಆಡಳಿತ ಪ್ರತಿಪಕ್ಷ ಸೇರಿ ಈ ಯೋಜನೆಯನ್ನು ಜಾರಿ ಮಾಡಬೇಕು. ನಾಡಿನ ನೆಲ‌, ಜಲ, ಭಾಷೆ ವಿಚಾರ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಆದರೆ ರಾಜಕೀಯ ಲಾಭದ ದುರುದ್ದೇಶದಿಂದ ಮೇಕೆದಾಟು ಪಾದಯಾತ್ರೆ ಪ್ರಾರಂಭ ಮಾಡಲಾಗಿತ್ತು. ಸೂಕ್ತ ಸಂದರ್ಭದಲ್ಲಿ ಇದು ಪ್ರಾರಂಭ ಆಗಿಲ್ಲ. ಇದರ ಅವಶ್ಯಕತೆ ಕೂಡಾ ಇರಲಿಲ್ಲ ಎಂದರು.

ಪಾದಯಾತ್ರೆ ರದ್ದುಗೊಳಿಸಲು ನಿರ್ಧಾರ : ಕಾಂಗ್ರೆಸ್ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ ಡಾ.ಕೆ ಸುಧಾಕರ್
ಯಾರೂ ಕೂಡ ಮೇಕೆದಾಟು ಯೋಜನೆ ಬೇಡ ಎಂದಿಲ್ಲ. ಎಲ್ಲರೂ ಈ ಯೋಜನೆಯ ಜಾರಿಗೆ ಬದ್ಧರಾಗಿದ್ದಾರೆ. ನ್ಯಾಯಾಲಯ ಮಧ್ಯ ಪ್ರವೇಶ ಮಾಡಿ ಕೊರೊನಾ ಸಂಬಂಧ ಸರ್ಕಾರದ, ಪ್ರತಿಪಕ್ಷದ ಸ್ಪಷ್ಟ ನಿಲುವು ಕೇಳಿದೆ. ಸರ್ಕಾರ ಯಾವುದೇ ಪಾದಯಾತ್ರೆಗೆ ಅವಕಾಶ ಕೊಟ್ಟಿರಲಿಲ್ಲ. ಎಲ್ಲದಕ್ಕೂ ನಿರ್ಬಂಧ ಇತ್ತು. ಪಾದಯಾತ್ರಗೆ ಯಾವುದೇ ಅನುಮತಿಯನ್ನು ಕೊಟ್ಟಿರದಿದ್ದರೂ, ಜವಾಬ್ದಾರಿ ಮರೆತು ಪಾದಯಾತ್ರೆ ಮಾಡಿದ್ದರು ಎಂದು ದೂರಿದರು.

ಮೇಕೆದಾಟು ಪಾದಯಾತ್ರೆ ಕೈಬಿಡಿ : ಸಿದ್ದರಾಮಯ್ಯ, ಡಿಕೆಶಿಗೆ ಬಸವರಾಜ ಬೊಮ್ಮಾಯಿ ಮನವಿ
ಭಂಡತನದಿಂದ ಇಂತಹ ಕಾರ್ಯದಲ್ಲಿ ಕಾಂಗ್ರೆಸಿಗರು ತೊಡಗಿದ್ದರು. ಆದರೆ ಪಾದಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ನಿಲುವು ತೆಗೆದುಕೊಂಡಿದ್ದೆವು. ಕಿವಿ ಮಾತು ಹೇಳಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದೆವು ಎಂದು ವಿವರಿಸಿದರು.

'ಅವರಿಗೆ ಮೇಕೆದಾಟು ಬಗ್ಗೆ ಯಾವುದೇ ಕಾಳಜಿ ಇಲ್ಲ. ನಾನು ನಾಯಕನಾಗಬೇಕು, ಸಿದ್ದರಾಮಯ್ಯಗೆ ಪೈಪೋಟಿ ಕೊಡಬೇಕು' ಎಂಬ ಕಲ್ಪನೆ ಮಾತ್ರ ಇದೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದರು.

ಕಾಂಗ್ರೆಸಿಗರು ಕೋವಿಡ್-19 ಇಲ್ಲ ಎನ್ನುತ್ತಿದ್ದರು. ಆದರೆ ಈಗ ಅವರ ನಾಯಕರೇ ಪಾಸಿಟಿವ್ ಎಂದು ಘೋಷಣೆ ಮಾಡುತ್ತಿದ್ದಾರೆ. ಏನೇ ಆಗಲಿ ಈ ಪಾದಯಾತ್ರೆ ಕೈಬಿಟ್ಟಿದ್ದು ಸಂತೋಷ ಎಂದು ಅಶ್ವತ್ಥ ನಾರಾಯಣ್‌ ಹೇಳಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ